ಆನೆ ದಾಳಿ 
ರಾಜ್ಯ

ಮಡಿಕೇರಿ: ಕಾಡಾನೆ ದಾಳಿಗೆ ಬಡ ದಿನಗೂಲಿ ಸಾವು

ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 

ಮಡಿಕೇರಿ: ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 

ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಚೆಟ್ಟಳ್ಳಿ ಸಮೀಪದ ಮಲ್ಕೋಡ್ ಗ್ರಾಮದ ನಿವಾಸಿ 60 ವರ್ಷದ ಮಹಮ್ಮದ್ ಮೃತವ್ಯಕ್ತಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಮೊಹಮ್ಮದ್ ಕೆಲಸಕ್ಕೆಂದು ಕಂದಕೆರೆ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. 

ದಾಳಿಯಲ್ಲಿ ಮೊಹಮ್ಮದ್ ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿತ್ತು. ಜೋರಾಗಿ ಕೂಗಿಕೊಂಡಿದ್ದರಿಂದ ಇತರ ಗ್ರಾಮಸ್ಥರನ್ನು ಅಲ್ಲಿಗೆ ತೆರಳಿದಾಗ ರಸ್ತೆಯ ಮೇಲೆ ಆತ ಅಂಗಾತ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಥಮ ಚಿಕಿತ್ಸೆ ನಂತರ ಉತ್ತಮ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಯಿತು.

ಆದರೆ, ತೀವ್ರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೊಹಮ್ಮದ್ ಪತ್ನಿಯನ್ನು ಅಗಲಿದ್ದು ಬಡ ದಂಪತಿಗೆ ಮಕ್ಕಳಿಲ್ಲ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ದಾಖಲಾಗಿದೆ. ಮಡಿಕೇರಿ ಡಿಸಿಎಫ್ ಪೊವಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT