ಮೈಸೂರು ಅರಮನೆ ಮುಂಭಾಗ ಗಜಪಡೆಗಳಿಗೆ ಅದ್ದೂರಿ ಸ್ವಾಗತ 
ರಾಜ್ಯ

2022ರ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಮುನ್ನುಡಿ ಬರೆದಾಗಿದೆ. ಮೊನ್ನೆ ಭಾನುವಾರ ಜಂಬೂ ಸವಾರಿಯಲ್ಲಿ ಚಾಮುಂಡಿ ದೇವಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಕಾಡಿನಿಂದ ಪೂಜೆ ನೆರವೇರಿಸಿ ನಾಡಿನತ್ತ ಕಳುಹಿಸಿದ್ದ ಗಜಪಡೆಗಳು ಇಂದು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿವೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಮುನ್ನುಡಿ ಬರೆದಾಗಿದೆ. ಮೊನ್ನೆ ಭಾನುವಾರ ಜಂಬೂ ಸವಾರಿಯಲ್ಲಿ ಚಾಮುಂಡಿ ದೇವಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಕಾಡಿನಿಂದ ಪೂಜೆ ನೆರವೇರಿಸಿ ನಾಡಿನತ್ತ ಕಳುಹಿಸಿದ್ದ ಗಜಪಡೆಗಳು ಇಂದು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿವೆ.

ಇಂದು ಮೈಸೂರು ಅರಮನೆ ಮುಂದೆ ಗಜಪಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತಿಸಿದರು.ಅರಮನೆಯ ಆನೆ ಬಾಗಿಲಲ್ಲಿ ಅಂಬಾರಿ ಹೊರಲಿರುವ ಅಭಿಮನ್ಯು ಸೇರಿದಂತೆ 9 ಆನೆಗಳಿಗೆ ಪೂಜೆ ಸಲ್ಲಿಸಿದ ಸಚಿವರು, ಬಳಿಕ ಕಾವಾಡಿಗರು ಮತ್ತು ಮಾವುತರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.

ಅರಮನೆ ಆವರಣದಲ್ಲಿ ಅಂಬಾರಿ ಹೊರಲಿರುವ ಅಭಿಮನ್ಯು, ಭೀಮ, ಮಹೇಂದ್ರ, ಗೋಪಾಲಸ್ವಾಮಿ, ಅರ್ಜುನ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮಿ ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಲಾಯಿತು  ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT