ಅಶ್ವತ್ಥ್ ನಾರಾಯಣ-ಮುತ್ತುರಾಮನ್ 
ರಾಜ್ಯ

ಯುವಿಸಿಇ ಆಡಳಿತ ಮಂಡಳ ಅಧ್ಯಕ್ಷರಾಗಿ ಮುತ್ತುರಾಮನ್ ನೇಮಕ

ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ(ಯುವಿಸಿಇ) ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಮುತ್ತುರಾಮನ್ ಅವರನ್ನು ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ(ಯುವಿಸಿಇ) ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಮುತ್ತುರಾಮನ್ ಅವರನ್ನು ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬುಧವಾರ ಈ ವಿಚಾರ ತಿಳಿಸಿರುವ ಅವರು, ಟಾಟಾ ಸ್ಟೀಲ್ಸ್ ಲಿಮಿಟೆಡ್ ಮತ್ತು ಟಾಟಾ ಇಂಟರ್ನ್ಯಾಷನಲ್ ಸಂಸ್ಥೆಗಳ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಮುತ್ತುರಾಮನ್ ಅವರ ಕಾರ್ಯಾವಧಿಯು 4 ವರ್ಷಗಳಾಗಿರುತ್ತದೆ ಎಂದಿದ್ದಾರೆ.

ಸರ್ಕಾರವು ಯುವಿಸಿಇ ಯನ್ನು ಉತ್ಕೃಷ್ಟ ಸಂಸ್ಥೆಯನ್ನಾಗಿ ಬೆಳೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಮುತ್ತುರಾಮನ್ ಅವರ ಅನುಭವವು ನೆರವಿಗೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಯುವಿಸಿಇಗೆ ಸಂಪೂರ್ಣ ಸ್ವಾಯತ್ತತೆ ನೀಡುವ ಸರ್ಕಾರದ ಪ್ರಕ್ರಿಯೆಯ ಮೊದಲ ಭಾಗವಾಗಿ ಈ‌ ನೇಮಕ ಮಾಡಲಾಗಿದೆ. ರಾಜ್ಯ ಮಟ್ಟದಲ್ಲಿ ಈ ರೀತಿಯ ಕ್ರಾಂತಿಕಾರಕ ತೀರ್ಮಾನ ಆಗಿರುವುದು ಇದೇ ಮೊದಲು. ಮುಂದಿನ ದಿನಗಳಲ್ಲಿ ಅಧ್ಯಕ್ಷರ ನೇಮಕದ ವಿಷಯದಲ್ಲಿ ಸರ್ಕಾರದ ಪಾತ್ರ ಹೆಚ್ಚಾಗಿ ಇರುವುದಿಲ್ಲ. ಹಾಲಿ ಇರುವ ಅಧ್ಯಕ್ಷರೇ ಅವರ ಉತ್ತರಾಧಿಕಾರಿಯನ್ನು ನೇಮಕ‌ ಮಾಡಲಿದ್ದಾರೆ. ಇದು ಐಐಎಂ, ಐಐಟಿ ಮಾದರಿಯಲ್ಲಿ ಇರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT