ಕಾಲುಸಂಕ ದಾಟುವಾಗ ಕೊಚ್ಚಿಹೋದ ಬಾಲಕಿ ಸನ್ನಿಧಿ 
ರಾಜ್ಯ

ತುಂಬಿ ಹರಿಯುತ್ತಿರುವ ಹೊಳೆಗೆ ಅಲುಗಾಡುವ ಕಾಲುಸಂಕ: ಪತ್ತೆಯಾಗದ ಸನ್ನಿಧಿ, ಸರ್ಕಾರದ ವಿರುದ್ಧ ಆಕ್ರೋಶ

ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಬೀಜಮಕ್ಕಿ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ಕಾಲುಸಂಕಕ್ಕೆ ಸರ್ಕಾರ ಹಣ ಮಂಜೂರು ಮಾಡಿದಾಗ ಜನರ ಸಂತೋಷಕ್ಕೆ ಪಾರವೇ ಇರಲಿಲ್ಲ. ಆದರೆ, ಇದುವರೆಗೂ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಈ ಮೂಲಕ ಸರ್ಕಾರಿ ಅಧಿಕಾರಿಗಳ ನಿರಾಸಕ್ತಿ ಬಯಲಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಬೀಜಮಕ್ಕಿ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ಕಾಲುಸಂಕಕ್ಕೆ ಸರ್ಕಾರ ಹಣ ಮಂಜೂರು ಮಾಡಿದಾಗ ಜನರ ಸಂತೋಷಕ್ಕೆ ಪಾರವೇ ಇರಲಿಲ್ಲ. ಆದರೆ, ಇದುವರೆಗೂ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಈ ಮೂಲಕ ಸರ್ಕಾರಿ ಅಧಿಕಾರಿಗಳ ನಿರಾಸಕ್ತಿ ಬಯಲಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಸೋಮವಾರ, ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಪ್ರದೀಪ್ ಮತ್ತು ಸುಮಿತ್ರಾ ಪೂಜಾರಿ ದಂಪತಿಯ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಹೊಳೆಗೆ ಅಡ್ಡಲಾಗಿ ಹಾಕಿರುವ ಕಾಲುಸಂಕವನ್ನು ದಾಟುವಾಗ ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಬೀಜಮಕ್ಕಿಯಿಂದ ಶಾಲೆಗೆ ಹೋಗಲು ಸುಮಾರು 10 ಮಕ್ಕಳು ಪ್ರತಿದಿನ ಕಾಲುಸಂಕವನ್ನು ಬಳಸುತ್ತಾರೆ. ಎಂಟು ತಿಂಗಳ ಹಿಂದೆಯೇ 11 ಲಕ್ಷ ರೂ. ಮಂಜೂರಾಗಿದ್ದರೂ, ಇಲ್ಲಿ ಪೂರ್ಣ ಪ್ರಮಾಣದ ಕಿರು ಸೇತುವೆ ನಿರ್ಮಾಣಕ್ಕೆ ಪಿಡಬ್ಲ್ಯುಡಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದೇ ಮರದ ಕಾಲುಸಂಕವನ್ನು ಸುಮಾರು 40 ಕುಟುಂಬಗಳು ಅವಲಂಬಿಸಿವೆ. ಈ ವರ್ಷ ಅತಿವೃಷ್ಟಿಯಿಂದ ಹೊಳೆ ತುಂಬಿ ಹರಿಯುತ್ತಿದ್ದು, ಸೇತುವೆಯ ಅಗತ್ಯವನ್ನು ಕಾಲ್ತೋಡು ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳಿಗೆ ಮತ್ತೊಮ್ಮೆ ನೆನಪಿಸಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಮಂಗಳವಾರ ಸನ್ನಿಧಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಶೋಧ ಕಾರ್ಯಾಚರಣೆ ತೀವ್ರಗೊಂಡಿದ್ದರೂ, ಇನ್ನೂ ಸನ್ನಿಧಿ ಪತ್ತೆಯಾಗಿಲ್ಲ. ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ ಸೇತುವೆ ನಿರ್ಮಿಸುವಂತೆ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ಟಿಎನ್‌ಐಇಗೆ ತಿಳಿಸಿದ್ದಾರೆ. ಜಿಲ್ಲೆಯ ಅನೇಕ ಭಾಗಗಳಲ್ಲಿ, ಸಣ್ಣ ಸೇತುವೆಗಳು ಮತ್ತು ಕ್ರೀಕಿಂಗ್ ಹಲಗೆಗಳನ್ನು ಶಾಲಾ ಮಕ್ಕಳು ಬಳಸುತ್ತಿದ್ದಾರೆ.

'ಅತ್ತಿಕೊಡ್ಲು-ದೊಡ್ಡಬೇರುನಲ್ಲಿರುವ ಒಂದು ಸಣ್ಣ ಸೇತುವೆಯು ನಮ್ಮ ಹಳ್ಳಿಯ ಅನೇಕ ಮಕ್ಕಳಿಗೆ ಸಹಾಯ ಮಾಡುತ್ತದೆ. ಸೇತುವೆ ನಿರ್ಮಾಣಕ್ಕೆ ಸುಮಾರು 7 ಲಕ್ಷ ರೂಪಾಯಿ ಹಣ ಬೇಕಾಗುತ್ತದೆ. ಈ ಬಗ್ಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಪಂಚಾಯತ್‌ಗೆ ಮನವಿ ಪತ್ರ ಸಲ್ಲಿಸಲಾಗಿದೆ' ಎಂದು ಪಕ್ಕದ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೇಖರ್ ಕುಲಾಲ್ ಟಿಎನ್ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT