ರಾಕೇಶ್ ಟಿಕಾಯತ್ 
ರಾಜ್ಯ

ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ: ನ್ಯಾಯಾಲಯಕ್ಕೆ ಪೊಲೀಸರಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್‌ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬೆಂಗಳೂರು: ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್‌ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಮೇ 30ರಂದು ಈ ಘಟನೆ ನಡೆದಿತ್ತು. ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಆಗಿನ ಕೆಆರ್‌ಆರ್‌ಎಸ್ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ಕೈವಾಡವಿದ್ದು ಈ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಕೇಶ್ ಟಿಕಾಯತ್ ಮತ್ತು ಮತ್ತೊಬ್ಬ ರೈತ ಮುಖಂಡ ಯುಧ್‌ವೀರ್ ಸಿಂಗ್  ಕೋರಿದ್ದರು.

ಭರತ್ ಶೆಟ್ಟಿ, ಪ್ರದೀಪ್, ಶಿವಕುಮಾರ್, ಉಮಾದೇವಿ ಸೇರಿದಂತೆ ಬಂಧಿತರ ವಿವರವೂ ಆರೋಪಪಟ್ಟಿಯಲ್ಲಿದೆ. ರಾಷ್ಟ್ರೀಯ ಮಟ್ಟದ ನಾಯಕರ ಗಮನ ಸೆಳೆಯುವುದೇ ದಾಳಿಯ ಹಿಂದಿನ ಪ್ರಮುಖ ಕಾರಣ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳು ತಮ್ಮ ಹೆಸರು ರಾತ್ರೋರಾತ್ರಿ ಮುಂಚೂಣಿಗೆ ಬರಬೇಕು. ರಾಜ್ಯದಲ್ಲಿ ಹೆಸರು ಮಾಡಬೇಕೆಂಬ ದುರುದ್ದೇಶದಿಂದ ಟಿಕಾಯತ್‌ಗೆ ಮಸಿ ಬಳಿದಿದ್ದರು’ ಎಂಬ ಅಂಶವನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಆಡಿಯೊ ಸಾಕ್ಷ್ಯ, 89 ಮಂದಿಯ ಹೇಳಿಕೆ ಸೇರಿ 450 ಪುಟಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿದ್ದಾರೆ. ನಗರದಲ್ಲಿ ಸಭೆ ನಡೆಯುವ ಮಾಹಿತಿ ತಿಳಿದಿದ್ದ ಆರೋಪಿಗಳು ಒಂದು ವಾರಕ್ಕೂ ಮೊದಲು ತಂತ್ರ ರೂಪಿಸಿದ್ದರು. ಟಿಕಾಯತ್‌ ಮೇಲೆ ಕೊಳೆತ ಟೊಮೆಟೊ ಹಾಗೂ ಮೊಟ್ಟೆ ಎಸೆಯುವ ಯೋಜನೆ ರೂಪಿಸಿಕೊಂಡಿದ್ದರು. ಅದು ಸಾಧ್ಯವಾಗದಿದ್ದರೆ ಮಸಿ ಬಳಿಯಲು ನಾಲ್ವರು ಒಂದೆಡೆ ಚರ್ಚಿಸಿ ಯೋಜನೆ ರೂಪಿಸಿಕೊಂಡು ಸಭೆಗೆ ಬಂದಿದ್ದರು ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್