ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳನ್ನು ಶಿಕ್ಷಕರು ಹೇಗೆ ತಿದ್ದಿತೀಡಬೇಕು, ಮಾರ್ಗದರ್ಶನ ನೀಡಬೇಕು?: ಬೆಂಗಳೂರಿನ ಶಿಕ್ಷಕಿಗೆ ನ್ಯಾಯಾಧೀಶರ ಪಾಠ!

ಶಿಕ್ಷೆಯ ಹೆಸರಿನಲ್ಲಿ ಮಕ್ಕಳನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆಗೊಳಪಡಿಸುವುದು ಸ್ವೀಕಾರಾರ್ಹವಲ್ಲ, ಇದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ಬೆಂಗಳೂರು: ಶಿಕ್ಷೆಯ ಹೆಸರಿನಲ್ಲಿ ಮಕ್ಕಳನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆಗೊಳಪಡಿಸುವುದು ಸ್ವೀಕಾರಾರ್ಹವಲ್ಲ, ಇದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ನರ್ಸರಿ ತರಗತಿಯ ಪುಟ್ಟ ಮಗುವಿಗೆ ಶಿಕ್ಷೆಯ ಹೆಸರಿನಲ್ಲಿ ಮಾನಸಿಕ ಹಿಂಸೆ ನೀಡಿದ ಪ್ರಕರಣದಲ್ಲಿ ಕೇಸು ದಾಖಲಾದ ಶಿಕ್ಷಕಿ ಮೇಲೆ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಈ ರೀತಿ ಹೇಳಿದ್ದು ಶಿಕ್ಷಕಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಮಕ್ಕಳ ರಕ್ಷಣೆಯಡಿ ಆರೋಪ ಮಾಡಲಾಗಿದೆ.

ನಡೆದ ಘಟನೆಯೇನು?: ಬೆಂಗಳೂರಿನ ನರ್ಸರಿ ಶಾಲೆಯೊಂದರಲ್ಲಿ ಓದುತ್ತಿರುವ 5 ವರ್ಷದ ಪುಟ್ಟ ಬಾಲಕಿಯ ತಾಯಿ 2017ರ ಫೆಬ್ರವರಿ 24ರಂದು ದೂರು ದಾಖಲಿಸಿದ್ದರು. ತನ್ನ ಮಗಳು ಪ್ರತಿದಿನ ಮನೆಗೆ ಅಳುತ್ತಾ ಬರುತ್ತಿದ್ದು ಶಾಲೆಯಲ್ಲಿ ಶಿಕ್ಷಕಿ ಹೊಡೆದಿದ್ದಾರೆ ಎಂದು ಹೇಳುತ್ತಾಳೆ. ಕತ್ತಲೆ ಕೋಣೆಯಲ್ಲಿ ಕೂಡಿಹಾಕಿ ಸ್ವಲ್ಪ ಹೊತ್ತು ಕಳೆದ ನಂತರ ಹೊರಗೆ ಬಿಡುತ್ತಾರೆ ಎಂದು ಹೇಳುತ್ತಾಳೆ. ಬಾಲಕಿಯ ಪ್ಯಾಂಟ್ ತೆಗೆಯುವಂತೆ ಹೇಳುವುದು, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುವುದನ್ನು ಮಾಡುತ್ತಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

41 ವರ್ಷದ ಶಿಕ್ಷಕಿ ವಿರುದ್ಧ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಿದ್ದರು. ವಿಶೇಷ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿಯಿದ್ದ ಕೇಸು ನಿನ್ನೆ ಹೈಕೋರ್ಟ್ ಮುಂದೆ ವಿಚಾರಣೆಗೆ ಬಂತು.

ಶಿಕ್ಷಕಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶ ಎಂ ನಾಗಪ್ರಸನ್ನ, ಶಿಕ್ಷಕ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಬೇಕು. ಚಿಕ್ಕಮಕ್ಕಳ ವಯಸ್ಸನ್ನು ಕೋಮಲಗೊಳಿಸಬೇಕು, ಪ್ರೀತಿಯಿಂದ ತಿದ್ದಿತೀಡಬೇಕು. ಶಿಕ್ಷಕರ ಕೈಯಲ್ಲಿ ಆಕ್ರಮಣಕಾರಿ ನಡವಳಿಕೆ ಅಥವಾ ಹಿಂಸಾಚಾರವನ್ನು ಅನುಭವಿಸುವ ಮಕ್ಕಳು ಸಾಮಾನ್ಯವಾಗಿ ಭಾವನಾತ್ಮಕ ಮತ್ತು ನಡವಳಿಕೆಯ ಸಮಸ್ಯೆಗಳನ್ನು ಬೆಳೆಸಿಕೊಳ್ಳುತ್ತಾರೆ, ಅವರ ಅರಿವಿನ ಕೌಶಲ್ಯಗಳು ಕಡಿಮೆಯಾಗುತ್ತವೆ. ಮಗುವಿನ ಮನಸ್ಸಿನ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತವೆ. ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಮಗುವಿನ ಮೇಲೆ ಯಾವುದೇ ಶಿಕ್ಷಕರ ಆಕ್ರಮಣವು ಕ್ಷಮಿಸಲಾಗದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT