ಮಾಜಿ ಸಚಿವ ಶಿವರಾದ್ ತಂಗಡಗಿ 
ರಾಜ್ಯ

ಬಿಜೆಪಿಯವರಿಗೆ ಅಷ್ಟು ದೇಶಭಕ್ತಿಯಿದ್ದರೆ ಉಚಿತವಾಗಿ ತ್ರಿವರ್ಣ ಧ್ವಜ ಹಂಚಲಿ, ಇವರು ಕೇವಲ ಪ್ರಚಾರಪ್ರಿಯರು: ಶಿವರಾಜ್ ತಂಗಡಗಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿಯವರು ಮಾಡುತ್ತಿರುವ ಹರ್ ಘರ್ ತಿರಂಗ ಕಾರ್ಯಕ್ರಮ ನಿಜವಾದ ದೇಶಭಕ್ತಿಯಿಂದ ಎಂದು ನನಗೆ ಅನಿಸುತ್ತಿಲ್ಲ. ತ್ರಿವರ್ಣ ಧ್ವಜಕ್ಕಿದ್ದ ಗೌರವ, ನಿಯಮಕ್ಕಿದ್ದ ಗೌರವವನ್ನು ಕಡಿಮೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ.

ಕೊಪ್ಪಳ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿಯವರು ಮಾಡುತ್ತಿರುವ ಹರ್ ಘರ್ ತಿರಂಗ ಕಾರ್ಯಕ್ರಮ ನಿಜವಾದ ದೇಶಭಕ್ತಿಯಿಂದ ಎಂದು ನನಗೆ ಅನಿಸುತ್ತಿಲ್ಲ. ತ್ರಿವರ್ಣ ಧ್ವಜಕ್ಕಿದ್ದ ಗೌರವ, ನಿಯಮಕ್ಕಿದ್ದ ಗೌರವವನ್ನು ಕಡಿಮೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ.

ಕೊಪ್ಪಳದಲ್ಲಿಂದು ಮಾತನಾಡಿದ ಅವರು, ಕಾಶ್ಮೀರ ಫೈಲ್ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿ ಎಲ್ಲರೂ ನೋಡಿ ಎಂದು ತೋರಿಸಿದ್ದ ರಾಷ್ಟ್ರಪ್ರೇಮವನ್ನು ಇಂದು ಬಿಜೆಪಿ ನಾಯಕರು ದೇಶದ ತ್ರಿವರ್ಣ ಧ್ವಜದ ಮೇಲೆ ತೋರಿಸುತ್ತಿಲ್ಲ, 40 ರೂಪಾಯಿ, 50 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಎಂದು ಹೇಳುತ್ತಿದ್ದಾರೆ. ಅಂದರೆ ಇವರಿಗಿರುವ ನಿಜವಾದ ದೇಶಭಕ್ತಿ ಇದರಿಂದ ಗೊತ್ತಾಗುತ್ತದೆ ಎಂದು ಟೀಕಿಸಿದರು.

ಇವರೆಲ್ಲ ದೇಶದ ಗೌರವಯುತವಾದ ಧ್ವಜದ ಹೆಸರಿನಲ್ಲಿ ಡೋಂಗಿ ಮಾಡುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ಈಗಾಗಲೇ ದೇಶದ ಜನತೆ ಬಹಳ ಕಷ್ಟದಲ್ಲಿದ್ದಾರೆ. ಅಗತ್ಯ ವಸ್ತುಗಳ ಮೇಲೆಯೂ ಜಿಎಸ್ ಟಿ ಹಾಕಿದ್ದಾರೆ. ಹೀಗಿರುವಾಗ ಮತ್ತೆ ಹಣ ಕೊಟ್ಟು ರಾಷ್ಟ್ರಧ್ವಜ ಖರೀದಿಸಿ ಎಂದು ಹೇಳುವುದು ಎಷ್ಟು ಸರಿ, ಅಷ್ಟಿದ್ದರೆ ಸರ್ಕಾರ ಉಚಿತವಾಗಿ ನೀಡಲಿ ಎಂದರು.

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ, ಕಾಶ್ಮೀರಿ ಫೈಲ್ಸ್ ನಂತಹ ಸಿನಿಮಾ ತೋರಿಸಲು ತೆರಿಗೆ ವಿನಾಯ್ತಿ ನೀಡುತ್ತೀರಿ. ಹಾಗಿರುವಾಗ ಧ್ವಜವನ್ನು ಉಚಿತವಾಗಿ ನೀಡಲಿ. ಇದು ದೇಶದ ಸಂವಿಧಾನವನ್ನು ತಿದ್ದಲು ಬಿಜೆಪಿ ಮಾಡುತ್ತಿರುವ ಕುತಂತ್ರ. ಇದೊಂದು ಭಾಗ ಎನಿಸುತ್ತಿದೆ ಎಂದು ಸಂದೇಹ ವ್ಯಕ್ತಪಡಿಸಿದರು.

ಮೇಕ್ ಇನ್ ಇಂಡಿಯಾ ಎನ್ನುತ್ತಾರಲ್ಲ, ಎಲ್ಲಿದೆ ಮೇಕ್ ಇನ್ ಇಂಡಿಯಾ ಚೀನಾದಿಂದ ಧ್ವಜವನ್ನು ತರಿಸುವುದು, ಪಾಲಿಸ್ಟರ್ ನಿಂದ ಧ್ವಜ ತಯಾರಿಸುವುದು ಮೇಕ್ ಇನ್ ಇಂಡಿಯಾವೇ. ಇವರ ಬಂಡವಾಳ ಎಲ್ಲ ಗೊತ್ತಾಗುತ್ತಿದೆ. ಇವರು ಕೇವಲ ಪ್ರಚಾರಪ್ರಿಯರು ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT