ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ 'ಯುವಜನ ಮಹೋತ್ಸವ' ಹಾಗೂ ವಿಶ್ವವಿದ್ಯಾನಿಲಯ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಚಿತ್ರನಟ ಯಶ್ ಜೊತೆ 
ರಾಜ್ಯ

ಭಾರತವನ್ನು ಮುಂದಿನ 25 ವರ್ಷಗಳಲ್ಲಿ ಮಹಾನ್ ಶಕ್ತಿಯಾಗಿ ಪರಿವರ್ತಿಸಲು ಕೆಲಸ ಮಾಡಿ: ಯುವಕರಿಗೆ ಸಿಎಂ ಬೊಮ್ಮಾಯಿ ಕರೆ

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಮೈಸೂರು: ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಅವರು ನಿನ್ನೆ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಬೃಹತ್ ಯುವಜನಸತ್ವವನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳು ದೇಶ ಮತ್ತು ಕರ್ನಾಟಕ ಎರಡಕ್ಕೂ ಸುವರ್ಣ ವರ್ಷವಾಗಿರಲಿದೆ ಎಂದರು. 

‘ನವ ಕರ್ನಾಟಕ’ ನಿರ್ಮಾಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಘೋಷಿಸಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು. “ರಾಜ್ಯಗಳ ಮರುಸಂಘಟನೆಯ ನಂತರ, ಕರ್ನಾಟಕವು ತನ್ನ ಎಲ್ಲಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ 5-ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿನ ಪೈಕಿ ರಾಜ್ಯವು 1.5 ಟ್ರಿಲಿಯನ್ ಡಾಲರ್ ಗುರಿಯನ್ನು ಹೊಂದಿದೆ ಎಂದರು. 

ಮೈಸೂರು ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ, ಬೇಲೂರು, ಹಳೇಬೀಡು, ಮೈಸೂರು ಭಾಗಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಇತರ ಪ್ರಮುಖ ತಾಣಗಳನ್ನು ಒಳಗೊಂಡ ಪ್ರವಾಸೋದ್ಯಮ ಸರ್ಕ್ಯೂಟ್‌ಗೆ ತಮ್ಮ ಸರ್ಕಾರ ಹಣ ಘೋಷಿಸಿದೆ ಎಂದು ಹೇಳಿದರು.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಚಿತ್ರದುರ್ಗ ಸೇರಿದಂತೆ ಇನ್ನಿತರೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿ ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಶತಮಾನದಷ್ಟು ಹಳೆಯದಾದ ಮಹಾರಾಜ ಮತ್ತು ಮಹಾರಾಣಿ ಕಾಲೇಜುಗಳ ನವೀಕರಣಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?