ಶಶಿಕಲಾ ಜೊಲ್ಲೆ 
ರಾಜ್ಯ

ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: 2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡ, ಲಂಬಾಣಿ ತಾಂಡಾ, ವಡ್ಡರ ಕೇರಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳು ವಾಸವಿರುವ ಸ್ಥಳಗಳಲ್ಲಿನ ದೇವಾಲಯ, ಪೂಜಾ ಮಂದಿರ, ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನವ ನಿರ್ಮಾಣಗಳ ಯೋಜನೆಗೆ ಸಂಬಂಧಿಸಿದ ಆರಾಧನಾ ಯೋಜನೆಗೆ ಮುಜರಾಯಿ ಇಲಾಖೆಯಿಂದ ಪ್ರಸ್ತುತ 2022-23ನೇ ಸಾಲಿನಲ್ಲಿ 49.74 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು, 19.09.2011 ರ ಸರಕಾರದ ಆದೇಶದಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಮಾರ್ಗಸೂಚಿಗಳ ಅನ್ವಯ 2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನ ಸಂಖ್ಯೆ ಆಧಾರದಲ್ಲಿ ಎಸ್‌.ಸಿ.ಪಿ ಯಡಿಯಲ್ಲಿ ರೂ. 19.38 ಕೋಟಿ ಹಾಗೂ ಟಿ.ಎಸ್‌.ಪಿ ಯೋಜನೆಯಡಿ ರೂ. 30.36 ಕೋಟಿ ಒಟ್ಟಾರೆ 49.74 ಕೋಟಿಗಳ ಅನುದಾನವನ್ನು ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯ ಆಧಾರದಲ್ಲಿ 31 ಜಿಲ್ಲೆಗಳಿಗೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?