ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಪ್ರಚಾರ 
ರಾಜ್ಯ

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಜಾತ್ರೆ: ಬಿಎಂಆರ್‌ಸಿಎಲ್

ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ.

ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ.

ಹೌದು.. ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು 60ಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬೆಂಗಳೂರು ಸಂತೆ ಜಾಗದಲ್ಲಿ ತಮ್ಮ ಉತ್ಪನ್ನಗಳನ್ನು ಉಚಿತವಾಗಿ ಮಾರಾಟ ಮಾಡಲು ಅನುಮತಿ ನೀಡುತ್ತದೆ. ‘ಕುಶಲಕರ್ಮಿಗಳೊಂದಿಗೆ ಖಾದಿ ಪ್ರದರ್ಶನ’ ಆಗಸ್ಟ್ 15 ರಿಂದ 21 ರವರೆಗೆ ಒಂದು ವಾರ ನಡೆಯಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಈ ಕುರಿತು ಬಿಎಂಆರ್ ಸಿಎಲ್ ನ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರ್ಯನಿರ್ವಾಹಕ ನಿರ್ದೇಶಕ ಎ ಎಸ್ ಶಂಕರ್ ಅವರು, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ನೊಂದಿಗೆ ಮಾತನಾಡಿದ್ದು, 'ಈಗಾಗಲೇ ಕರ್ನಾಟಕದಾದ್ಯಂತದ ಕುಶಲಕರ್ಮಿಗಳಿಂದ ಮಳಿಗೆಗಳನ್ನು ಕಾಯ್ದಿರಿಸಲಾಗಿದೆ. ಒಂದು ವಾರದವರೆಗೆ ನಮಗೆ ಯಾವುದೇ ಶುಲ್ಕವನ್ನು ಪಾವತಿಸದೆ ನಮ್ಮ ಜಾಗದಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಅವರಿಗೆ ಅನುಮತಿಸಲಾಗುವುದು. ನಾವು ರಾಜ್ಯದಲ್ಲಿ ಗುಡಿ ಕೈಗಾರಿಕೆಯನ್ನು ಉತ್ತೇಜಿಸಲು ಬಯಸುತ್ತೇವೆ. ಸಂತೆಯಲ್ಲಿ ಸಣ್ಣ ತಿನಿಸುಗಳಿಗೂ ಅನುಮತಿ ನೀಡಲಾಗುವುದು ಎಂದರು.

ಅಂತೆಯೇ ಖಾದಿ ವಸ್ತುಗಳು, ಕಲೆ ಮತ್ತು ಕರಕುಶಲ ವಸ್ತುಗಳು, ಬಟ್ಟೆ, ಗೃಹಾಲಂಕಾರ, ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಉಡುಪುಗಳು, ಸಾವಯವ ಉತ್ಪನ್ನಗಳು, ಆಭರಣಗಳು, ಸೀರೆಗಳು, ಪುರುಷರು, ಮಹಿಳೆಯರು ಮತ್ತು ಮಕ್ಕಳ ಉಡುಪುಗಳು ಮತ್ತು ಇತರ ಉತ್ಪನ್ನಗಳು ನೇರವಾಗಿ ತಯಾರಕರಿಂದ ಗ್ರಾಹಕರಿಗೆ ಮಾರಟವಾಗಲಿವೆ. ಆ ಮೂಲಕ ಖಾದಿ ಉದ್ಯಮಕ್ಕೆ BMRCL ಪ್ರಚಾರ ಮಾಡಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!