ಚೈತ್ರ-ಶಿವಕುಮಾರ್ ದಂಪತಿ 
ರಾಜ್ಯ

ಹೊಳೆನರಸಿಪುರ: ವಿಚ್ಛೇದನದ ವಿಷಯವಾಗಿ ಕೋರ್ಟ್ ಆವರಣದಲ್ಲೇ ಪತ್ನಿಯ ಹತ್ಯೆ ಮಾಡಿದ ವ್ಯಕ್ತಿ 

ವಿಚ್ಛೇದನದ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಇರಿದು ಹತ್ಯೆ ಮಾಡಿರುವ ಘಟನೆ ಹಾಸನದ ಹೊಳೆನರಸಿಪುರದಲ್ಲಿ ನಡೆದಿದೆ. 

ಹಾಸನ: ವಿಚ್ಛೇದನದ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಇರಿದು ಹತ್ಯೆ ಮಾಡಿರುವ ಘಟನೆ ಹಾಸನದ ಹೊಳೆನರಸಿಪುರದಲ್ಲಿ ನಡೆದಿದೆ. 

ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ವಿಚ್ಛೇದನದ ಸಂಬಂಧ ಜೆಎಂಎಫ್ ಸಿ ಕೋರ್ಟ್ ಗೆ ಹಾಜರಾಗಿದ್ದ, ಈ ವೇಳೆ ತನ್ನ ಪತ್ನಿ ಚೈತ್ರಾ(24) ಳನ್ನು ಇರಿದು ಹತ್ಯೆ ಮಾಡಿದ್ದಾನೆ ಎಂದು ಎಸ್ ಪಿ ಹರಿರಾಮ್ ಶಂಕರ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.
 
ಕೋರ್ಟ್ ಪೊಲೀಸರು ಚೈತ್ರಾ ಅವರನ್ನು ತಾಲೂಕು ಆಸ್ಪತ್ರೆಗೆ ತಕ್ಷಣವೇ ದಾಖಲಿಸಿದರು, ಆ ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರುವ ವೇಳೆಗೆ ಆಕೆ ಮೃತಪಟ್ಟಿದ್ದರು. 

ಶಿವಕುಮಾರ್ ಅವರನ್ನು 5 ವರ್ಷಗಳ ಹಿಂದೆ ವಿವಾಹವಾಗಿದ್ದ ಚೈತ್ರಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಆಗಾಗ್ಗೆ ಕೌಟುಂಬಿಕ ವಿಷಯವಾಗಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಕಾರಣ ಬೇಸತ್ತ ಚೈತ್ರ 2 ವರ್ಷಗಳ ಹಿಂದೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿ ಜೀವನಾಂಶ ಕೇಳಿದ್ದರು.  ಸಂಬಂಧಿಕರು ಹಲವು ಬಾರಿ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದರಾದರೂ ಅದು ಪ್ರಯೋಜನವಾಗಿರಲಿಲ್ಲ. 

ನ್ಯಾಯಾಧೀಶರು ಲೋಕ್ ಅದಾಲತ್ ನಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವುದಕ್ಕಾಗಿ ದಂಪತಿಗೆ ಸಮನ್ಸ್ ಕಳಿಸಿದ್ದರು.  ಈ ಘಟನೆ ನಡೆಯುವುದಕ್ಕೂ ಒಂದು ಗಂಟೆ ಮುನ್ನ ನ್ಯಾಯಾಧೀಶರು ಶಿವಕುಮಾರ್ ಹಾಗೂ ಚೈತ್ರ ಜೊತೆ ಮಾತನಾಡಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT