ಸಾಂದರ್ಭಿಕ ಚಿತ್ರ 
ರಾಜ್ಯ

ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದ ಪ್ರಕರಣ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕೋಮು ಸೌಹಾರ್ದತೆಗೆ ಧಕ್ಕೆ (ಐಪಿಸಿ 153ಎ) ಹಾಗೂ ಉದ್ದೇಶಪೂರ್ವಕವಾಗಿ ಕೋಮು ಗಲಭೆಗೆ ಪ್ರಚೋದನೆ (ಐಪಿಸಿ 295 ಎ) ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

‘ಫ್ಲೆಕ್ಸ್ ಹರಿದು ಹಾಕುತ್ತಿರುವ ದೃಶ್ಯವನ್ನು ಆರೋಪಿಗಳೇ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಅದೇ ವಿಡಿಯೊವನ್ನು ಪುರಾವೆಯಾಗಿ ಪರಿಶೀಲಿಸಲಾಗಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

ಇನ್ನು ನೃಪತುಂಗ ರಸ್ತೆ ಹಾಗೂ ಹಡ್ಸನ್‌ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಫ್ಲೆಕ್ಸ್ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಸ್ಥಳಕ್ಕೆ ಹೋಗಿದ್ದ ಪುನೀತ್ ಕೆರೆಹಳ್ಳಿ ಹಾಗೂ ಇತರರು, ಫ್ಲೆಕ್ಟ್ ಹರಿದು ಹಾಕಿದ್ದಾರೆ. ಈ ವಿಚಾರ ಬೆಳಕಿಗೆ ಬರುತ್ತಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT