ಶಿವಮೊಗ್ಗ ಉದ್ವಿಗ್ನ 
ರಾಜ್ಯ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಕಿಡಿಗೇಡಿಗಳು; ಮತ್ತೊಂದೆಡೆ ಇಬ್ಬರಿಗೆ ಚೂರಿ ಇರಿತ; ಸೆಕ್ಷನ್ 144 ಜಾರಿ!

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಶಿವಮೊಗ್ಗ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಇನ್ನು ಫ್ಲೆಕ್ಸ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸಿದ್ದು ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸೆಕ್ಷನ್ 144 ಜಾರಿ ಮಾಡಲಾಗಿದೆ. 

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮೀ ಪ್ರಾಸದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ 3 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತ
ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಎರಡು ಗಂಟೆ ಅವಧಿಯಲ್ಲಿ ಇಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಉಪ್ಪಾರಕೇರಿ ಬಡಾವಣೆಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಹಾಗೂ ಅಶೋಕ ನಗರದಲ್ಲಿ ಪ್ರವೀಣ್ ಎಂಬುವರಿಗೆ ಚೂರಿ ಇರಿಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT