ರಾಜ್ಯ

ಜಗ್ಗೇಶ್ ನಿರ್ಮಾಣದ 'ವಂದೇ ಮಾತರಂ' ಆಲ್ಬಮ್ ಶ್ಲಾಘಿಸಿದ ಪ್ರಧಾನಿ ಮೋದಿ

Nagaraja AB

ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಈ ವಿಡಿಯೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್ ಗೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗೈದ ರಾಜ್ಯದ ಅಪ್ರತಿಮ ಸಾಧಕರ ಅತ್ಯುತ್ತಮ ಪ್ರಯತ್ನ ಎಂದು ಕನ್ನಡದಲ್ಲಿಯೇ ಶೀರ್ಷಿಕೆ ನೀಡಿ ಪ್ರಧಾನಿ ಮೋದಿ ರಿಟ್ವೀಟ್ ಮಾಡಿದ್ದಾರೆ. 

ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿನಲ್ಲಿ ಸಾಲು ಮರದ ತಿಮ್ಮಕ್ಕ, ಜೋಗತಿ ಮಂಜಮ್ಮ, ಸಾಹಿತಿ ಎಸ್. ಎಲ್. ಬೈರಪ್ಪ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್,  ನಟರಾದ ಶಿವರಾಜ್ ಕುಮಾರ್, ರವಿಚಂದ್ರನ್, ಸುದೀಪ್, ಜಗ್ಗೇಶ್, ರಮೇಶ್ ಅರವಿಂದ್, ಅನಂತ್ ನಾಗ್ ಮತ್ತಿತರಿದ್ದಾರೆ. 

SCROLL FOR NEXT