ಅಪಘಾತದ ನಂತರದ ದೃಶ್ಯ 
ರಾಜ್ಯ

ಕೋಲಾರದ ಮುಳಬಾಗಿಲು ಬಳಿ ಖಾಸಗಿ ಬಸ್ ಅಪಘಾತ: ದಂಪತಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ತೀವ್ರ ಅಪಘಾತದಲ್ಲಿ ಆಂಧ್ರ ಪ್ರದೇಶ  ಮೂಲದ ದಂಪತಿ ಮೃತಪಟ್ಟಿದ್ದಾರೆ.

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ತೀವ್ರ ಅಪಘಾತದಲ್ಲಿ ಆಂಧ್ರ ಪ್ರದೇಶ  ಮೂಲದ ದಂಪತಿ ಮೃತಪಟ್ಟಿದ್ದಾರೆ. ಬಸ್ಸು ಗುಂಟೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. 

ಇಂದು ಬುಧವಾರ ಮುಂಜಾನೆ 5.30ರ ಸುಮಾರಿಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿರೂಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದುರ್ಘಟನೆ ನಡೆದಿದೆ. ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ವೇಮುರಿ ಹೆಸರಿನ ಖಾಸಗಿ ಬಸ್ ವಿಜಯವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ನಸುಕಿನ ಜಾವ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ಮುಳಬಾಗಿಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ನಲ್ಲಿ ಕಳುಹಿಸುವ ವ್ಯವಸ್ಥೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT