ಧಾರ್ಮಿಕ ದತ್ತಿ ಇಲಾಖೆ 
ರಾಜ್ಯ

ದೇವಾಲಯ, ಮಠ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ಏನಿದೆ?

ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.

ಬೆಂಗಳೂರು: ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.

ಮುಜರಾಯಿ ಇಲಾಖೆ ಒಟ್ಟು 142.59 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್​ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ  148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.

ಷರತ್ತು ವಿಧಿಸಿರುವ ಸರ್ಕಾರ: ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜುರಾದ ಅನುದಾನವನ್ನು ‘ಖಜಾನೆ-2’ ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್​ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್​ರ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್​ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ. 

ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ ‘ಮುಂಗಡ ರಸೀದಿ’ (Advance Receipt) ಪಡೆದು ಸಾದಿಲ್ವಾರು ಬಿಲ್​ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು.

ಅನುದಾನ ಬಳಕೆ ಬಗ್ಗೆ ಪ್ರತಿ ಮೂರು ತಿಂಗಳಿಗೆ ಒಮ್ಮೆ ಮುಜರಾಯಿ ಇಲಾಖೆಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ಅನುದಾನ ಬಳಕೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ಹಾಗೂ ಇತರ ನಿಯಮಗಳು ಅನ್ವಯವಾಗುತ್ತವೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT