ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ 
ರಾಜ್ಯ

ಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿತ್ತು: ಮಣಿಶಂಕರ್‌ ಅಯ್ಯರ್‌

ಪಂಚಾಯತಿ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ.

ಬೆಂಗಳೂರು: ಪಂಚಾಯತಿ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ.

ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಮಣಿ ಶಂಕರ್ ಅಯ್ಯರ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 'ಈ ವೇಳೆ ಪಂಚಾಯತಿ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು. ನಿರೀಕ್ಷಿತ ವೇಗದಲ್ಲಿ ಕೆಲಸ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

'ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡಿದ್ದರು. ದೇಶದಲ್ಲೇ ಅನುಷ್ಠಾನಕ್ಕೆ ಮೊದಲನೆಯದಾಗಿ ಒತ್ತು ನೀಡಿದ ರಾಜ್ಯ ಕರ್ನಾಟಕ. ಅಬ್ದುಲ್‌ ನಜೀರ್‌ ಸಾಬ್‌ ಅವರು ರಾಜೀವ್‌ಗಾಂಧಿ ಅವರಿಂದ ಸಾಕಷ್ಟು ಮಾರ್ಗದರ್ಶನ ಪಡೆದರು. ಕರ್ನಾಟಕದಲ್ಲಿ ಇಂದಿಗೂ ಪಂಚಾಯತ್‌ ರಾಜ್‌ ಸಂಸ್ಥೆಗಳು ಕ್ರಿಯಾಶೀಲವಾಗಿವೆ. ತಳಮಟ್ಟದಲ್ಲಿ ಆಡಳಿತಕ್ಕೆ, ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಮಣಿಶಂಕರ್ ಅಯ್ಯರ್ ಹೇಳಿದರು. 

ಇತ್ತೀಚಿನ ದಿನಗಳಲ್ಲಿ ಪಂಚಾಯತಿ ರಾಜ್‌ ಕಾನೂನು ಜಾರಿಯಲ್ಲಿ ಎದುರಾದ ಸಮಸ್ಯೆಗಳನ್ನು ಅಧ್ಯಯನ ನಡೆಸಲು ಕರ್ನಾಟಕ ಸರ್ಕಾರ ಪ್ರಯತ್ನ ಮಾಡಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ರಚಿಸಿದ್ದ ರಮೇಶ್‌ ಕುಮಾರ್‌ ಸಮಿತಿಯು ಕಾನೂನನ್ನು ಅತ್ಯಂತ ಆಳವಾಗಿ ಅಧ್ಯಯನ ನಡೆಸಿ ವರದಿ ನೀಡಿತು. ಈ ವರದಿ ಆಧಾರದಲ್ಲಿ, ದೇಶದಲ್ಲೇ ಅತ್ಯುತ್ತಮ ಎನ್ನಬಹುದಾದ ಕಾನೂನನ್ನು ರೂಪಿಸಲಾಗಿದೆ. ಆದರೆ ಬೇಸರದ ಸಂಗತಿ ಎಂದರೆ, ಆಗಿನ ಕಾಂಗ್ರೆಸ್‌ ಸರ್ಕಾರ, ಈ ಕಾನೂನು ಜಾರಿಗೆ ಅಗತ್ಯ ವೇಗವನ್ನು ನೀಡಲಿಲ್ಲ. ಸಹಜವಾಗಿಯೇ, ಮುಂದೆ ಬಂದ ಕಾಂಗ್ರೆಸ್ಸೇತರ ಸರ್ಕಾರವೂ ಇದೇ ಧೋರಣೆಯನ್ನು ಮುಂದುವರಿಸಿತು ಎಂದರು.

ಅತ್ಯುತ್ತಮ ಕಾನೂನನ್ನು ರೂಪಿಸಲಾಯಿತು, ಅದರ ಉಪಯೋಗಗಳೇನು ಎನ್ನುವುದೂ ನಿಮಗೆ ಗೊತ್ತಿತ್ತು. ಆದರೆ ಅದನ್ನು ಜಾರಿ ಮಾಡಲು ಅಗತ್ಯ ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ. ಇದು ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ಸರ್ಕಾರಕ್ಕೂ ಅನ್ವಯವಾಗುತ್ತದೆ ಎಂದು ಅಯ್ಯರ್ ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT