ವೀರ ಸಾವರ್ಕರ್(ಸಂಗ್ರಹ ಚಿತ್ರ) 
ರಾಜ್ಯ

ತುಮಕೂರಿನಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದ: ಪೋಸ್ಟರ್ ಹರಿದುಹಾಕಿದ ಕಿಡಿಗೇಡಿಗಳು, ಸಂಘಟನೆಗಳ ಆಕ್ರೋಶ

ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಗಲಾಟೆ ನಡೆದು ಇಬ್ಬರಿಗೆ ಚಾಕು ಇರಿತವಾಗಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತುಮಕೂರು  ನಗರದಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್‌ ಭಾವಚಿತ್ರ ಇರುವ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. 

ತುಮಕೂರು:  ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಗಲಾಟೆ ನಡೆದು ಇಬ್ಬರಿಗೆ ಚಾಕು ಇರಿತವಾಗಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತುಮಕೂರು  ನಗರದಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್‌ ಭಾವಚಿತ್ರ ಇರುವ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. 

ನಗರದ ಬಿಜಿಎಸ್‌ ವೃತ್ತದಿಂದ ಬಸ್‌ ನಿಲ್ದಾಣದ ಕಡೆಗೆ ತೆರಳುವ ಅಶೋಕ ರಸ್ತೆಯಲ್ಲಿ ಎಂಪ್ರೆಸ್‌ ಕಾಲೇಜು ಮುಂಭಾಗದಲ್ಲಿ ಸಾವರ್ಕರ್‌ ಚಿತ್ರ ಇರುವ ಪ್ಲೆಕ್ಸ್‌ ಹಾಕಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಮುಗಿದ ಬಳಿಕ ರಾತ್ರಿ ಯಾರೋ ಕಿಡಿಗೇಡಿಗಳು ಸಾವರ್ಕರ್‌ ಭಾವಚಿತ್ರ ಇರುವ ಫ್ಲೆಕ್ಸ್‌ನ್ನು ಹರಿದು ಹಾಕಿರುವ ಸಂಗತಿ ಬೆಳಕಿಗೆ ಬಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜ್ಯೋತಿಗಣೇಶ್‌ ನಗರದ ವಿವಿಧ ಭಾಗಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಇರುವ ಫ್ಲೆಕ್ಸ್‌ ಹಾಕಿಸಿದ್ದರು. ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಸಾವರ್ಕರ್‌ ಅವರ ಚಿತ್ರವನ್ನು ಮಾತ್ರ ಹರಿದು ಹಾಕುವ ಮೂಲಕ ಶಿವಮೊಗ್ಗ ಬಳಿಕ ತುಮಕೂರಿನಲ್ಲೂ ಫ್ಲೆಕ್ಸ್‌ ಸಮರ ಶುರುವಾಗಿದೆ.

ಸಾವರ್ಕರ್‌ ಫೋಟೋ ಹರಿದವರಿಗೆ ಗುಂಡು ಹಾರಿಸಿ: ಸೊಗಡು ಶಿವಣ್ಣ
ವೀರ ಸಾವರ್ಕರ್‌ ಫೋಟೋ ಹರಿದವರಿಗೆ ಕಂಡಲ್ಲಿ ಗುಂಡು ಹೊಡೆಯಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸೊಗಡು ಶಿವಣ್ಣ ಗುಡುಗಿದ್ದಾರೆ. ಶಾಂತಿಭಂಗ ಮಾಡುವವರನ್ನು ಗಡಿಪಾರು ಮಾಡಬೇಕು. ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ವೇಳೆ ನಡೆದ ಘಟನೆ ಮತ್ತೆ ಎಲ್ಲೂ ಮರುಕಳಿಸದಂತೆ ಕೊನೆಗಾಣಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಪೊಲೀಸರು ನಿಗಾ ವಹಿಸಬೇಕು. ಶಿವಮೊಗ್ಗದಲ್ಲಿನ ಘಟನೆ ಕೊನೆ ಆಗಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT