ಎಕೆ-47 ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿಯ ಐಟಿಬಿಪಿ ಕ್ಯಾಂಪ್‌ನಿಂದ ಎರಡು ಎಕೆ-47 ರೈಫಲ್‌ ಕಳವು

ಆಘಾತಕಾರಿ ಘಟನೆಯೊಂದರಲ್ಲಿ, ಬೆಳಗಾವಿಯ ಹಾಲಭಾವಿ ಗ್ರಾಮದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತರಬೇತಿ ಕ್ಯಾಂಪಸ್‌ನಿಂದ ಎರಡು ಎಕೆ -47 ರೈಫಲ್‌ಗಳನ್ನು ಕಳವು ಮಾಡಿರುವುದು ಪತ್ತೆಯಾಗಿದೆ. 

ಬೆಳಗಾವಿ: ಆಘಾತಕಾರಿ ಘಟನೆಯೊಂದರಲ್ಲಿ, ಬೆಳಗಾವಿಯ ಹಾಲಭಾವಿ ಗ್ರಾಮದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತರಬೇತಿ ಕ್ಯಾಂಪಸ್‌ನಿಂದ ಎರಡು ಎಕೆ -47 ರೈಫಲ್‌ಗಳನ್ನು ಕಳವು ಮಾಡಿರುವುದು ಪತ್ತೆಯಾಗಿದೆ. 

ಬೆಳಗಾವಿ ಪೊಲೀಸರಿಗೆ ಐಟಿಬಿಪಿ ಸಲ್ಲಿಸಿರುವ ದೂರಿನ ಪ್ರಕಾರ, ಈಗ ನಡೆಯುತ್ತಿರುವ 48ನೇ ಇಂಡಕ್ಷನ್ ಪೂರ್ವ ತರಬೇತಿಯಲ್ಲಿ (ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ನಿಯೋಜನೆಗಾಗಿ) ಎರಡು ಎಕೆ-47 ರೈಫಲ್‌ಗಳನ್ನು ಮದುರೈ ಐಟಿಬಿಪಿಯ ರಾಜೇಶ್ ಕುಮಾರ್ ಮತ್ತು ಸಂದೀಪ್ ಮೀನಾ ಅವರಿಗೆ ನೀಡಲಾಗಿತ್ತು. 120 ಪುರುಷರ ಬ್ಯಾರಕ್‌ನ 3ನೇ ಮಹಡಿಯಿಂದ ಈ ರೈಫಲ್‌ಗಳನ್ನು ಕಳವು ಮಾಡಲಾಗಿದೆ. ಬಹುಶಃ ಆಗಸ್ಟ್ 16-17ರ ಮಧ್ಯರಾತ್ರಿ ಈ ಕಳ್ಳತನ ನಡೆದಿದೆ ಎಂದು ಹೇಳಿದೆ.

ಪ್ರತ್ಯಕ್ಷದರ್ಶಿಗಳಾಗಿರುವ ರಾಜೇಶ್ ಕುಮಾರ್ ಮತ್ತು ಸಂದೀಪ್ ಮೀನಾ ಅವರ ರೂಮ್‌ಮೇಟ್‌ಗಳಾದ ಮನೀಷ್ ಪುನೇತಾ ಮತ್ತು ಮೊಹಮ್ಮದ್ ಅಸ್ಲಾಂ ಅವರು ಆಗಸ್ಟ್ 17 ರಂದು ಎರಡು ಬಂದೂಕುಗಳನ್ನು ನೋಡಿದ್ದಾರೆ. ಐಟಿಬಿಪಿ, ದೂರಿನಲ್ಲಿ, ಎಲ್ಲಾ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಾಜೇಶ್ ಕುಮಾರ್, ಸಂದೀಪ್ ಮೀನಾ, ಮನೀಶ್ ಪುನೇತಾ ಮತ್ತು ಮೊಹಮ್ಮದ್ ಅಸ್ಲಾಂ ಅವರು ಐಟಿಬಿಪಿ ಕ್ಯಾಂಪಸ್ ಆವರಣದಲ್ಲಿ ಶಸ್ತ್ರಾಸ್ತ್ರಗಳ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಿದ್ದರು, ಆದರೆ ಅವುಗಳನ್ನು ಪತ್ತೆಹಚ್ಚಲು ವಿಫಲರಾಗಿದ್ದಾರೆ.

ಈ ಕುರಿತು ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಉಪ ಪೊಲೀಸ್ ಆಯುಕ್ತೆ(ಅಪರಾಧ ಮತ್ತು ಸಂಚಾರ) ಪಿ ವಿ ಸ್ನೇಹಾ ಅವರು ತನಿಖೆಯ ಸಮಯದಲ್ಲಿ ವಿಶೇಷ ತಂಡವನ್ನು ಮುನ್ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT