ಸಿದ್ದರಾಮಯ್ಯ 
ರಾಜ್ಯ

ರಂಭಾಪುರಿ ಶ್ರೀಗಳ ಮುಂದೆ ಲಿಂಗಾಯಿತ ಧರ್ಮದ ಕುರಿತು ಚರ್ಚಿಸಿದ್ದೆ ಅಷ್ಟೆ, ಪಶ್ಚಾತಾಪಪಟ್ಟಿಲ್ಲ: ಸಿದ್ದರಾಮಯ್ಯ

ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳೊಂದಿಗೆ ಲಿಂಗಾಯಿತ ಧರ್ಮದ ಈ ಹಿಂದಿನ ಘಟನೆಗಳ ಕುರಿತು ಚರ್ಚಿಸಿದ್ದೆ ಹೊರತು ಪಶ್ಚಾತಾಪದ ಮಾತುಗಳನ್ನಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ: ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳೊಂದಿಗೆ ಲಿಂಗಾಯಿತ ಧರ್ಮದ ಈ ಹಿಂದಿನ ಘಟನೆಗಳ ಕುರಿತು ಚರ್ಚಿಸಿದ್ದೆ ಹೊರತು ಪಶ್ಚಾತಾಪದ ಮಾತುಗಳನ್ನಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ವೀರಶೈವ ಮತ್ತು ಲಿಂಗಾಯತ ಧರ್ಮದ ಬಗ್ಗೆ ಎಂದಿಗೂ ಚರ್ಚಿಸುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದುತ್ವ ಎಂಬುದು ಬಿಜೆಪಿ ಮತ್ತು ಅದರ ನಾಯಕರ ಹಿಡನ್ ಅಜೆಂಡಾವಾಗಿದ್ದು, ಹಿಂದೂ ರಾಷ್ಟ್ರವನ್ನು ಮಾಡಲು ವ್ಯರ್ಥ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಜನರು ಪಕ್ಷ ಮತ್ತು ಜಾತಿಯನ್ನು ಮೀರಿ ಎಲ್ಲ ಧರ್ಮಗಳನ್ನು ಗೌರವಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಗೌರವಿಸಬೇಕು. ಜಾತಿಯ ತಾರತಮ್ಯವನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರೂ ಆದರೆ ಅಲ್ಪಸಂಖ್ಯಾತ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುವ ಮನಸ್ಸು ಮಾಡಿಲ್ಲ. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ರಾಜ್ಯದಲ್ಲಿನ ವಿರೋಧ ಪಕ್ಷದ ನಾಯಕನಿಗೆ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT