ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ 
ರಾಜ್ಯ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಕಾಂಗ್ರೆಸ್ ಕಾರ್ಯಕರ್ತ: ಆರೋಪಿ ಸಂಪತ್

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.

ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.

ಈ ಹಿಂದೆ ಕೊಡಗಿನ ನೆರೆಹಾನಿ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿ ಸಂಪತ್ ಸಿದ್ದು ಕಾರಿನತ್ತ ಮೊಟ್ಟೆ ತೂರಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಅಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ತೀವ್ರ ಕಿಡಿಕಾರಿದ್ದ ಕಾಂಗ್ರೆಸ್ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದರು.

ಮೊಟ್ಟೆ ಎಸೆತ ಪ್ರಕರಣಕ್ಕೆ ಟ್ವಿಸ್ಟ್, ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ
ಇನ್ನು ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ದೊರೆತಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಪತ್, 'ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಂಪತ್​ ಹೇಳಿದ್ದಾನೆ. 

ಆರೋಪಿ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮೊದಲು ಸಂಪತ್ ಈ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT