ಸಿಎಂ ಬೊಮ್ಮಾಯಿ 
ರಾಜ್ಯ

ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ರೂ. ಅನುದಾನ- ಸಿಎಂ ಬೊಮ್ಮಾಯಿ

ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿಗ್ಗಾವಿ: ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿಗ್ಗಾಂವ್ ವಕೀಲರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಿದಂತೆ ನ್ಯಾಯಾಲಯಗಳು, ಅದರ ಸೌಕರ್ಯಗಳನ್ನು ಹೆಚ್ಚಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ತಾರ ನ್ಯಾಯಾಂಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಎಲ್ಲ ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.

ಭಾರತದ ನ್ಯಾಯಾಂಗ ವ್ಯವಸ್ಥೆಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗಕ್ಕೆ ಗೌರವ, ಅಧಿಕಾರ ಮತ್ತು ಜವಾಬ್ದಾರಿಯನ್ನು ನೀಡಲಾಗಿದೆ. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾತ್ರವಲ್ಲ, ಲೋಕತಂತ್ರ, ಜನತಂತ್ರದ ಆಚರಣೆಯಾಗಿದೆ. ಈ ಲೋಕತಂತ್ರಕ್ಕೆ 75 ವರ್ಷ ಕಟ್ಟು ನಿಟ್ಟಾಗಿ ನಡೆದುಕೊಂಡು ಬಂದಿರುವುದರಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದಿದೆ ಎಂದರು.

ಭಾರತದಲ್ಲಿ ಪ್ರಜಾಪ್ರಭುತ್ವದ ಬೇರು ಗಟ್ಟಿಯಾಗಿದ್ದು, ಅದರ ಆದರ್ಶಗಳು ಇಂದಿಗೂ ಜೀವಂತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಸರಿಯಿಲ್ಲದಿದ್ದರೆ ಬದುಕಿಗೆ ಸಮಭಾವ ಸಿಗುವುದು ಕಷ್ಟವಾಗುತ್ತದೆ  ಎಂದು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT