ಅಪಘಾತವಾದ ಕಾರು 
ರಾಜ್ಯ

ಹೊಸಕೋಟೆ ಬಳಿ ಕಾರು ಭೀಕರ ಅಪಘಾತ: ಅಕ್ಕ-ತಮ್ಮ ಸಾವು

ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಟ್ಟೂರು ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.

ಹೊಸಕೋಟೆ: ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಟ್ಟೂರು ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.ಮೃತರನ್ನು ಬೆಂಗಳೂರಿನ ಶಾಜಿಯಾ ಬಾನು(26ವ) ಮತ್ತು ಇಬ್ರಾಹಿಂ ಸಾಬ್ (16ವ) ಎಂದು ಗುರುತಿಸಲಾಗಿದೆ. 

ಅಪಘಾತ ಹೇಗಾಯಿತು?: ಹೊಸಕೋಟೆಯ ಅಟ್ಟೂರು ಬಳಿ ಡಾಬಾವೊಂದರ ಹತ್ತಿರ ಹೋಗುತ್ತಿದ್ದಾಗ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆಗ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. 

ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ಗೊತ್ತಾಗುತ್ತಲೇ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ. 
ಕಾರಿನಲ್ಲಿ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಅವರು ಮುರುಗಮಲ್ಲ ದರ್ಗಾಕ್ಕೆ ಹೋಗಿ ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಅಲ್ಲಿ ಚಹಾ ಕುಡಿದು ಕೋಲಾರ ಹೆದ್ದಾರಿ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಅಜ್ಜಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!