ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ 
ರಾಜ್ಯ

ಅರ್ಧಕ್ಕೆ ನಿಂತ ಶೌಚಾಲಯ ಕಾಮಗಾರಿ: ಪಾಲಿಕೆಗೆ ಸಾರ್ವಜನಿಕರ ಹಿಡಿಶಾಪ

ಜಾಲಹಳ್ಳಿ ಕ್ರಾಸ್ ಬಸ್ ನಿಲ್ದಾಣದ ಬಳಿ ಅರ್ಧಕ್ಕೆ ನಿಂತಿರುವ ಸಾರ್ವಜನಿಕ ಶೌಚಾಲಯವನ್ನು ಪೂರ್ಣಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಜನಾರ್ದನನ್ 2016 ರಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ವ್ಯರ್ಥವಾಗಿದೆ.  

ಬೆಂಗಳೂರು: ಜಾಲಹಳ್ಳಿ ಕ್ರಾಸ್ ಬಸ್ ನಿಲ್ದಾಣದ ಬಳಿ ಅರ್ಧಕ್ಕೆ ನಿಂತಿರುವ ಸಾರ್ವಜನಿಕ ಶೌಚಾಲಯವನ್ನು ಪೂರ್ಣಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಜನಾರ್ದನನ್ 2016 ರಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ವ್ಯರ್ಥವಾಗಿದೆ. 

ಪ್ರತಿದಿನ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಹೋಗಲು ಸಾವಿರಾರು ಜನರು ಈ ಜಾಲಹಳ್ಳಿ ಕ್ರಾಸ್ ಬಸ್ ನಿಲ್ದಾಣ ಮಾರ್ಗವನ್ನು ದಾಟಿ ಹೋಗುತ್ತಾರೆ. ಹೀಗಾಗಿ ಇಲ್ಲಿನ ಬಸ್ ನಿಲ್ದಾಣವು ಸದಾಕಾಲ ಕಾರ್ಯನಿರತವಾಗಿರುತ್ತದೆ ಮತ್ತು ಜನಜಂಗುಳಿಯಿಂದ ತುಂಬಿರುತ್ತದೆ. ಸಾವಿರಾರು ಜನರು ಪ್ರಯಾಣಿಸುವ ಈ ಜಾಗದಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಹಾಲಿ ಇರುವ ಶೌಚಾಲಯದ ಸ್ಥಿತಿಯು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಇಲ್ಲಿ ಶೌಚಾಲಯ ನಿರ್ಮಾಣಕ್ಕೆ ಪಾಲಿಕೆ ಮುಂದಾಗಿತ್ತು. ಅಲ್ಲದೆ ಈ ಸಂಬಂಧ ನಿರ್ದಿಷ್ಟ ಜಾಗದಲ್ಲಿ ಕಾಮಗಾರಿ ಕೂಡ ಆರಂಭವಾತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಶೌಚಾಲಯದ ರಚನೆಯು ಸಿದ್ಧವಾಗಿದೆ, ಆದರೆ ಬಾಗಿಲುಗಳು ಮತ್ತು ಕಿಟಕಿಗಳಿಲ್ಲ. ಜನಾರ್ಧನ್ ಅವರು ಬಿಬಿಎಂಪಿ ಸಹಾಯ ಸೆಲ್‌ಗೆ  ಬಾರಿ ಸಂಪರ್ಕಿಸಿದ್ದಾರೆ, ಬಿಬಿಎಂಪಿ ಆಯುಕ್ತರಿಗೆ ಮತ್ತು ಸಿಎಂಗೆ ದೂರು ನೀಡಿದ್ದಾರೆ, ಆದರೆ ಯಾವುದೇ ಪರಿಹಾರ ಕಾಣುತ್ತಿಲ್ಲ ಎಂದು ಅವರು ಹೇಳಿದರು.

''ಕಸವನ್ನು ಸುರಿಯಲು ಸ್ಥಳವನ್ನು ಬಳಸಲಾಗುತ್ತಿದೆ. ಕೆಲವರು ಇಲ್ಲಿಗೆ ಬಂದು ಮೂತ್ರ ವಿಸರ್ಜನೆ ಮತ್ತು ಮಲವಿಸರ್ಜನೆ ಮಾಡುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ಮುಚ್ಚಿ ಇಲ್ಲವೇ ಬಾಗಿಲುಗಳನ್ನು ಒದಗಿಸಿ ಸೂಕ್ತ ಶೌಚಾಲಯವಾಗಿ ಬಳಸಿಕೊಳ್ಳುವಂತೆ ಬಿಬಿಎಂಪಿಗೆ ಮನವಿ ಮಾಡಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾನು ಪ್ರತಿ ಬಾರಿ ಬಿಬಿಎಂಪಿ ಸೆಲ್‌ಗೆ ದೂರು ಸಲ್ಲಿಸಿದಾಗ, ಸಿಬ್ಬಂದಿ ಇಳಿದು ಕೆಲವು ಬಾಹ್ಯ ಶುಚಿಗೊಳಿಸುವಿಕೆ ಮತ್ತು ಬ್ಲೀಚಿಂಗ್ ಕೆಲಸವನ್ನು ಮಾಡುತ್ತಾರೆ ಮತ್ತು ನಂತರ ದೂರು ಮುಚ್ಚಲಾಗಿದೆ ಎಂಬ ಸಂದೇಶ ಕಳುಹಿಸುತ್ತಾರೆ. ಸಮಸ್ಯೆಯ ತಿರುಳು ಎಂದಿಗೂ ಪರಿಹಾರವಾಗುವುದಿಲ್ಲ. ಸಂಪೂರ್ಣ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಬಿಬಿಎಂಪಿ ಮುಂದಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿಯ ಒಳಚಂರಡಿ ನೀರು ನಿರ್ವಹಣೆ ವಿಭಾಗದ ಜಂಟಿ ಆಯುಕ್ತ ಪರಶುರಾಮ್ ಅವರು TNIE ಜೊತೆ ಮಾತನಾಡಿದ್ದು, “ಸ್ಥಳದ ವಿವರಗಳನ್ನು ಹಂಚಿಕೊಳ್ಳಿ. ನಾನು ಖಂಡಿತವಾಗಿಯೂ ಆ ಪ್ರದೇಶದಲ್ಲಿನ ನನ್ನ ಸಿಬ್ಬಂದಿಯನ್ನು ಎಚ್ಚರಿಸುತ್ತೇನೆ ಮತ್ತು ಸಮಸ್ಯೆಗೆ ಶಾಶ್ವತ ಪರಿಹಾರವನ್ನು ತರುತ್ತೇನೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT