ಕೊಡಗಿನಲ್ಲಿ ಸಿದ್ದರಾಮಯ್ಯ 
ರಾಜ್ಯ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಉನ್ನತ ಮಟ್ಟದ ತನಿಖೆ ಆರಂಭ

ಕೊಡಗಿನಲ್ಲಿ ಇತ್ತೀಚೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.

ಮಡಿಕೇರಿ: ಕೊಡಗಿನಲ್ಲಿ ಇತ್ತೀಚೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ. ಮೊಟ್ಟೆ ಎಸೆದ ಕಿಡಿಗೇಡಿಗಳ ಪತ್ತೆಗೆ ವಿಶೇಷ ತಂಡವನ್ನು ನೇಮಿಸಲಾಗಿದ್ದು, ಸ್ಥಳ ಪರಿಶೀಲನೆ ನಡೆಸಲಾಗಿದೆ.

ವಿಶೇಷ ಪೊಲೀಸ್ ತಂಡವು ಗುಡ್ಡೆಹೊಸೂರಿಗೆ ಆಗಮಿಸಿದ್ದು, ಆಗಸ್ಟ್ 18 ರಂದು ವರದಿಯಾದ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದೃಶ್ಯಾವಳಿ, ಸಿಸಿಟಿವಿ ದೃಶ್ಯಗಳು, ಪತ್ರಿಕೆಗಳ ವರದಿಗಳು ಸೇರಿದಂತೆ ಪ್ರಾಥಮಿಕ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಚಾಮರಾಜನಗರ ಜಿಲ್ಲಾಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರನ್ನು ಉನ್ನತ ಮಟ್ಟದ ತನಿಖಾ ಅಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.

ಏತನ್ಮಧ್ಯೆ, ಸಿದ್ದರಾಮಯ್ಯ ಅವರ ವಾಹನದ ಮೇಲೆ ಮೊಟ್ಟೆ ಎಸೆದ ಆರೋಪಿ ಸಂಪತ್ ವಿರುದ್ಧ ರಾಜಕೀಯ ಪಕ್ಷಗಳಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳು ಮುಂದುವರೆದಿವೆ. ಸಂಪತ್ ತಮ್ಮ ಬೆಂಬಲಿಗ ಎಂಬ ಆರೋಪವನ್ನು ಹಿರಿಯ ಕಾಂಗ್ರೆಸ್ ನಾಯಕ ಬಿಎ ಜೀವಿಜಯ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಅಲ್ಲದೆ ಗುತ್ತಿಗೆದಾರರಾಗಿರುವ ಸಂಪತ್ ಅವರು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರಿಂದ ಗುತ್ತಿಗೆ ಪಡೆಯಲು ಸಹಾಯ ಪಡೆದಿದ್ದಾರೆ ಎಂದು ಜೀವಿಜಯ ಆರೋಪಿಸಿದ್ದಾರೆ.

ಸಂಪತ್ ಅವರ ಸಾಮಾಜಿಕ ಮಾಧ್ಯಮ ಪುಟವು ಎಲ್ಲಾ ರಾಜಕೀಯ ಪಕ್ಷಗಳ ಛಾಯಾಚಿತ್ರಗಳ ಸಂಯೋಜನೆಯಾಗಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷದ ಕಾರ್ಯಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಪ್ರದರ್ಶಿಸುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಅವರನ್ನು ಪಕ್ಷದ ಕಾರ್ಯಕರ್ತ ಎಂದು ನಿರಾಕರಿಸಿದ್ದರೂ ಸಹ ಸಂಪತ್ ಆರ್‌ಎಸ್‌ಎಸ್, ವಿಎಚ್‌ಪಿ ಮತ್ತು ಇತರ ಹಿಂದೂ ಸಂಘಟನೆಗಳು ಆಯೋಜಿಸುವ ಹಲವಾರು ಹಿಂದುತ್ವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ಸೋಮವಾರಪೇಟೆಯಲ್ಲಿರುವ ಸಂಪತ್ ಅವರ ನಿವಾಸಕ್ಕೆ ಪೊಲೀಸರಿಂದ ಭದ್ರತೆಯನ್ನು ನೀಡಲಾಗಿದ್ದು, ಸಂಪತ್ ಕೊಡಗಿನಲ್ಲಿಲ್ಲ ಎಂದು ಅವರ ಕುಟುಂಬ ಖಚಿತಪಡಿಸಿದ ನಂತರ ಭದ್ರತೆ ಹಿಂಪಡೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT