ಸಾಂದರ್ಭಿಕ ಚಿತ್ರ 
ರಾಜ್ಯ

KPTCL ಪ್ರಶ್ನೆ ಪತ್ರಿಕೆ ನಕಲು ಪ್ರಕರಣ: 9 ಆರೋಪಿಗಳ ಬಂಧನ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಗದಗದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರು. ಆಗಸ್ಟ್ 7ರಂದು ನಡೆದಿದ್ದ ಪರೀಕ್ಷೆಯಲ್ಲಿ ಗೋಕಾಕ್ ನಲ್ಲಿ ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರೂ ಎಂದು ಬೆಳಗಾವಿ ಎಸ್ ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ. 

ಇನ್ನು ನಿನ್ನೆ ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಸೋರಿಕೆ ಆಗಿತ್ತು. ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು.

ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಸಮೀತ್ ಕುಮಾರ್ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದು ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂದು ಶಂಕಿಸಲಾಗಿದೆ. 

2022ರ ಆಗಸ್ಟ್ 7ರ ಭಾನುವಾರ ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT