ಲೆಕ್ಕ ಪರಿಶೋಧಕರ ಸಮ್ಮೇಳನದಲ್ಲಿ ಪ್ರದರ್ಶಿಸಲ್ಪಟ್ಟ ಯಕ್ಷಗಾನ ಕಾರ್ಯಕ್ರಮ 
ರಾಜ್ಯ

ಲೆಕ್ಕ ಪರಿಶೋಧನೆ ಅಧ್ಯಯನದಲ್ಲಿ ತಂತ್ರಜ್ಞಾನ ಒಂದು ಭಾಗ, ಬದುಕಿಗೆ ಅನಿವಾರ್ಯ: ಐಸಿಎಐ ಅಧ್ಯಕ್ಷ ದೇಬಾಶಿಸ್ ಮಿತ್ರಾ

ಭವಿಷ್ಯದಲ್ಲಿ ಆರ್ಥಿಕತೆಗೆ ತಂತ್ರಜ್ಞಾನವು ದೊಡ್ಡ ಶಕ್ತಿಯಾಗಲಿದೆ. ಕೃತಕ ಬುದ್ದಿಮತ್ತೆ ಸೇರಿ ಆಧುನಿಕ ತಂತ್ರಜ್ಞಾನಗಳನ್ನು ಇಂದಿನ ವ್ಯವಹಾರಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ(ICAI) ಅಧ್ಯಕ್ಷ ದೇಬಾಶಿಸ್ ಮಿತ್ರಾ ಹೇಳಿದ್ದಾರೆ.

ಬೆಂಗಳೂರು: ಭವಿಷ್ಯದಲ್ಲಿ ಆರ್ಥಿಕತೆಗೆ ತಂತ್ರಜ್ಞಾನವು ದೊಡ್ಡ ಶಕ್ತಿಯಾಗಲಿದೆ. ಕೃತಕ ಬುದ್ದಿಮತ್ತೆ ಸೇರಿ ಆಧುನಿಕ ತಂತ್ರಜ್ಞಾನಗಳನ್ನು ಇಂದಿನ ವ್ಯವಹಾರಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ(ICAI) ಅಧ್ಯಕ್ಷ ದೇಬಾಶಿಸ್ ಮಿತ್ರಾ ಹೇಳಿದ್ದಾರೆ.

ಅವರು ಬೆಂಗಳೂರಿನಲ್ಲಿ ನಡೆದ ಲೆಕ್ಕ ಪರಿಶೋಧಕರು(CA) ಎರಡು ದಿನ ಸಮ್ಮೇಳನ 'ಜ್ಞಾನ ಸಂಗಮ'ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಲೆಕ್ಕ ಪರಿಶೋಧನೆಯಲ್ಲಿ ತಂತ್ರಜ್ಞಾನವನ್ನು ಒಂದು ಭಾಗವಾಗಿ ಕಲಿಯಬೇಕು. ಬದುಕಿಗೆ ಅನಿವಾರ್ಯವಾಗಿದೆ ಎಂದರು.

ಡಿಜಿಟಲ್ ಪೂರ್ವ ಮತ್ತು ಡಿಜಿಟಲ್ ನಂತರದ ಅವಧಿಯಲ್ಲಿ ತಂತ್ರಜ್ಞಾನ ಹೇಗಿದೆ ಎಂಬುದು ಮುಖ್ಯವಾಗುತ್ತದೆ. ಇಂದು ಕೃತಕ ಬುದ್ಧಿಮತ್ತೆ(Artificial intelligence) ಮುಂಚೂಣಿ ಕ್ಷೇತ್ರವಾಗಿದೆ. ಸಮಾಜದಲ್ಲಿ ನಡೆಯುವ ವಂಚನೆ ಪತ್ತೆ, ತಂತ್ರಜ್ಞಾನದ ಅರಿವಿನಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

1947ರ ನಂತರ ಲೆಕ್ಕಪರಿಶೋಧಕರು ಸಲ್ಲಿಸಿದ ಪ್ರಬಂಧಗಳು ಸೇರಿ ಎಲ್ಲವನ್ನೂ ಡಿಜಿಟಲೀಕರಣಗೊಳಿಸಲು ಉದ್ದೇಶಿಸಲಾಗಿದೆ. ಇದುವರೆಗೆ ಸುಮಾರು 3.5 ಕೋಟಿ ದಾಖಲೆಗಳು ಡಿಜಿಟಲೀಕರಣಗೊಂಡಿವೆ. ಹಿರಿಯ ಲೆಕ್ಕಪರಿಶೋಧಕರು ತಾವು ವಿದ್ಯಾರ್ಥಿಯಾಗಿದ್ದಾಗ ಸಲ್ಲಿಸಿದ್ದ ಪ್ರಬಂಧಗಳನ್ನು ಇಂದಿನ ಲೆಕ್ಕ ಪರಿಶೋಧಕರು ವೀಕ್ಷಿಸಿ ಅಧ್ಯಯನ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ದಕ್ಷಿಣ ಪ್ರಾದೇಶಿಕ ಲೆಕ್ಕಪರಿಶೋಧಕರ ಪರಿಷತ್ ಅಧ್ಯಕ್ಷ ಚಿನಾ ಮಸ್ತಾನ್ ತಲಕಾಯಲ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಲೆಕ್ಕ ಪರಿಶೋಧಕರ ಸಂಸ್ಥೆಯ ಅಧ್ಯಕ್ಷ ಟಿ ಶ್ರೀನಿವಾಸ್, ಪದಾಧಿಕಾರಿಗಳು ಹಾಜರಿದ್ದರು.

ಯಕ್ಷಗಾನ ಪ್ರದರ್ಶನ: ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕರು ದಕ್ಷ ಯಜ್ಞ ಯಕ್ಷಗಾನ ಪ್ರದರ್ಶನ ನೀಡಿ ಪ್ರೇಕ್ಷಕರ ಮನಸೂರೆಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT