ವಿಜಯಪುರ ಕಾಂಗ್ರೆಸ್ ಕಚೇರಿ ಗೋಡೆಗೆ ವೀರ ಸಾವರ್ಕರ್ ಫೋಟೋ ಅಂಟಿಸಿದ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ 
ರಾಜ್ಯ

ವಿಜಯಪುರ ಕಾಂಗ್ರೆಸ್ ಕಚೇರಿ ಗೋಡೆಗೆ ವೀರ ಸಾವರ್ಕರ್ ಫೋಟೋ: ಆರೋಪಿ ಬಸವರಾಜ ಹೂಗಾರ ಬಂಧಿಸುವಂತೆ ಆಗ್ರಹ

ರಾಜ್ಯದಲ್ಲಿ ವೀರ ಸಾವರ್ಕರ್​ ಭಾವಚಿತ್ರ ಅಂಟಿಸುವ ವಿವಾದ ಕಾಡ್ಗಿಚ್ಚಿನಂತೆ ವಿವಿಧ ಜಿಲ್ಲೆಗಳಿಗೆ ಹಬ್ಬುತ್ತಿದೆ. ನಿನ್ನೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಹಿಂದೂಪರ ಸಂಘಟನೆ ಸದಸ್ಯರೊಬ್ಬರು ಅಂಟಿಸಿದ್ದಾರೆ.

ವಿಜಯಪುರ: ರಾಜ್ಯದಲ್ಲಿ ವೀರ ಸಾವರ್ಕರ್​ ಭಾವಚಿತ್ರ ಅಂಟಿಸುವ ವಿವಾದ ಕಾಡ್ಗಿಚ್ಚಿನಂತೆ ವಿವಿಧ ಜಿಲ್ಲೆಗಳಿಗೆ ಹಬ್ಬುತ್ತಿದೆ. ನಿನ್ನೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಹಿಂದೂಪರ ಸಂಘಟನೆ ಸದಸ್ಯರೊಬ್ಬರು ಅಂಟಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದೇ ತಿಂಗಳು ಕೊನೆಗೆ ಇರುವ ಹಿಂದೂಗಳ ಪ್ರಮುಖ ಹಬ್ಬ ಗಣೇಶ ಚತುರ್ಥಿ ಅಂಗವಾಗಿ 9 ದಿನಗಳ ಕಾಲ ವೀರ ಸಾವರ್ಕರ್ ಭಾವಚಿತ್ರವನ್ನು ಅಲ್ಲಲ್ಲಿ ನೇತಾಡಿಸಲು  ತೀರ್ಮಾನಿಸಿದ್ದಾರೆ. ನಿನ್ನೆ ಕಾಂಗ್ರೆಸ್ ಕಚೇರಿ ಹೊರಗೆ ಹಿಂದೂಪರ ಸಂಘಟನೆ ಸದಸ್ಯರು  ತಡರಾತ್ರಿ ಆಗಮಿಸಿ ಹತ್ತಕ್ಕೂ ಹೆಚ್ಚು ಫೋಟೋ ಅಂಟಿಸಿದ್ದಾರೆ. ಕಾಂಗ್ರೆಸ್​ ಕಚೇರಿಯ ಬಾಗಿಲು, ಬೋರ್ಡ್, ಗೋಡೆಗಳಿಗೆ ಫೋಟೋ  ಅಂಟಿಸಿ ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಗೆ ಸಿಬ್ಬಂದಿ ಬಂದು ನೋಡಿದಾಗ ವಿಷಯ ಗಮನಕ್ಕೆ ಬಂದಿದ್ದು ಪೊಲೀಸರಿಗೆ ವಿಷಯ ಮುಟ್ಟಿಸಿದರು. ಪೊಲೀಸರ ಭದ್ರತೆ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಇಂದು ವಿ ಡಿ ಸಾವರ್ಕರ್ ಫೋಟೋಗಳನ್ನು ಕಚೇರಿ ಗೋಡೆಯಿಂದ ಕಿತ್ತೆಸೆದರು. 

ಇಂದು ಬಿಜೆಪಿ ಯುವ ಮೋರ್ಚಾ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಹಾಗೂ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ: ಇನ್ನು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿಕೆ ನೀಡಿರುವ ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹೂಗಾರ, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ನವರು ಸಾವರ್ಕರ್ ಫೋಟೋ ಸುಟ್ಟಿದ್ದರು. ಈ ಮೂಲಕ ವಿ.ಡಿ.ಸಾವರ್ಕರ್​​ಗೆ ಅಪಮಾನ ಮಾಡಿದ್ದಾರೆ. ಇಂಥ ವಿವಾದ ಸೃಷ್ಟಿಸುವ ಕೆಲಸ ಪದೇಪದೆ ಮಾಡುತ್ತಿದ್ದಾರೆ.

ವಿವಾದ ಅಂತ್ಯಗೊಳಿಸಲು ಕಾಂಗ್ರೆಸ್ ಕಚೇರಿ ಗೋಡೆಗೆ ಸಾವರ್ಕರ್ ಫೋಟೋ ಅಂಟಿಸಿದ್ದೇನೆ. ಸಾವರ್ಕರ್ ಫೋಟೋ ಅಂಟಿಸಿದ್ದು ದೊಡ್ಡ ಅಪರಾಧವಲ್ಲ. ಸಾವರ್ಕರ್ ಬಗ್ಗೆ ಮಾತನಾಡುವುದನ್ನು ಇಲ್ಲಿಗೆ ನಿಲ್ಲಿಸಿದರೆ ಸರಿ, ಇಲ್ಲದಿದ್ದರೆ ನಾಳೆ ‘ಕೈ’​​ ನಾಯಕರ ಮನೆಗಳಿಗೆ ಫೋಟೋ ಹೋಗುತ್ತೆ, ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ. ಲಜ್ಜೆಗೇಡಿತನ ಕೆಲಸ ಮಾಡುತ್ತಿರುವ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು, ಇಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಹೂಗಾರ್ ಅವರನ್ನು ಬಂಧಿಸಬೇಕು: ಕಾಂಗ್ರೆಸ್ ಕಚೇರಿ ಗೋಡೆಗೆ ಸಾವರ್ಕರ್ ಫೋಟೋ ಅಂಟಿಸಿರುವ ಬಸವರಾಜ ಹೂಗಾರ ಅವರನ್ನು ಪೊಲೀಸರು ತಕ್ಷಣ ಬಂಧಿಸಬೇಕು, ಒಂದು ವೇಳೆ ಪೊಲೀಸರು ಬಂಧಿಸುವಲ್ಲಿ ವಿಫಲರಾದರೆ ಬಿಜೆಪಿಯವರು ವಿರೋಧಿಸುವ ಟಿಪ್ಪು ಸುಲ್ತಾನ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಬಿಜೆಪಿ ಕಚೇರಿ ಹೊರಗೆ ಅಂಟಿಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT