ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಜ್ಯೋತಿಷಿ ಪರಾರಿ

ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.

ಆವಲಹಳ್ಳಿಯಲ್ಲಿ ಆಶ್ರಮ ನಡೆಸುತ್ತಿರುವ ಆನಂದ್ ಮೂರ್ತಿ (52) ಪರಾರಿಯಾಗಿರುವ ಜ್ಯೋತಿಷಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ತಿಂಗಳ ಹಿಂದೆ ತಮ್ಮ ಸಮಸ್ಯೆಗೆ ಪರಿಹಾರ ಕೇಳಿಕೊಂಡು ಆನಂದ ಮೂರ್ತಿಯನ್ನು ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಸಮಸ್ಯೆಯನ್ನು ಪರಿಹರಿಸುವ ದೇವಿಯನ್ನು ತಾನು ಪೂಜಿಸುತ್ತಿದ್ದೇನೆ ಎಂದು ಮೂರ್ತಿ ಹೇಳಿಕೊಂಡಿದ್ದ. ಆಕೆಯ  ಪರಿಸ್ಥಿತಿಯ ಲಾಭ ಪಡೆದ ಆತ ಲೈಂಗಿಕವಾಗಿ ಬಳಸಿಕೊಂಡಿದ್ದ. ಆಕೆಗೆ ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದ.

ಅತ್ಯಾಚಾರವೆಸಗಿದ್ದ ವಿಡಿಯೋ ರೆಕಾರ್ಡ್ ಮಾಡಿದ್ದ ಆನಂದ ಮೂರ್ತಿ ಅದನ್ನು ಸಂತ್ರಸ್ತೆಯ ಪ್ರಿಯಕರನಿಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ.

ದೂರಿನ ಆಧಾರದ ಮೇಲೆ ಕೆಆರ್ ಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಆಶ್ರಮದಿಂದ ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT