ಲೋಕೇಶ್ ಎಂ ಬಿ ಅಲಿಯಾಸ್ ಸ್ನೇಕ್ ಲೋಕಿ 
ರಾಜ್ಯ

ಬೆಂಗಳೂರು: ಹಾವು ಕಚ್ಚಿ ಉರಗ ತಜ್ಞ ಸ್ನೇಕ್ ಲೋಕೇಶ್ ನಿಧನ

ಹಾವು ಹಿಡಿಯುವ ಕೆಲಸದಲ್ಲಿ ಪರಿಣಿತರಾಗಿದ್ದಉರಗ ತಜ್ಞರೊಬ್ಬರು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನೆಲಮಂಗಲದ ದಾಬಸ್ ಪೇಟೆ ಬಳಿ ನಡೆದಿದೆ.

ಬೆಂಗಳೂರು: ಹಾವು ಹಿಡಿಯುವ ಕೆಲಸದಲ್ಲಿ ಪರಿಣಿತರಾಗಿದ್ದಉರಗ ತಜ್ಞರೊಬ್ಬರು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನೆಲಮಂಗಲದ ದಾಬಸ್ ಪೇಟೆ ಬಳಿ ನಡೆದಿದೆ.

49 ವರ್ಷದ  ಲೋಕೇಶ್ ಎಂ ಬಿ ಅಲಿಯಾಸ್ ಸ್ನೇಕ್ ಲೋಕಿ ಸಾವನ್ನಪ್ಪಿದ್ದಾರೆ. ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಯಾಗಿದ್ದ ಸ್ನೇಕ್ ಲೋಕಿ 'ಪರಮಾತ್ಮ' ಎಂಬ ಉಪಾಹಾರ ಗೃಹವನ್ನು ಸಹ ನಡೆಸುತ್ತಿದ್ದರು.

ಸೋಮವಾರ ಸಂಜೆ ರೈತರೊಬ್ಬರ ಮನೆಗೆ ಹಾವು ನುಗ್ಗಿತ್ತು, ಅದನ್ನು ಹಿಡಿಯಲು ಸ್ನೇಕ್ ಲೋಕಿ ತೆರಳಿದ್ದರು, ನಾಗರ ಹಾವನ್ನು ಹಿಡಿಯುವಾಗ ಅದು ಎರಡು ಬಾರಿ ಲೋಕೇಶ್ ಅವರ ತೋರು ಬೆರಳು ಮತ್ತು ಹೆಬ್ಬೆರಳಿಗೆ ಕಚ್ಚಿತ್ತು. ನಂತರ ಅದನ್ನು ಸಮೀಪದ ಕಾಡಿಗೆ ಬಿಟ್ಟಿದ್ದರು.

ಘಟನೆ ನಡೆದ ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಹಾವನ್ನು ಕಾಡಿಗೆ ಬಿಟ್ಟು ಆಸ್ಪತ್ರೆಗೆ ತೆರಳುವ ವೇಳೆಗೆ ದೇಹಕ್ಕೆ ವಿಷ ಹರಡಿತ್ತು, ಅವರನ್ನು ಯಶವಂತಪುರದಲ್ಲಿರುವ ದೊಡ್ಡ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ, ಸೋಮವಾರ ರಾತ್ರಿ ನಿಧನರಾದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT