ಸಾಂದರ್ಭಿಕ ಚಿತ್ರ 
ರಾಜ್ಯ

'ಪ್ಲಾಸ್ಟರ್ ಆಫ್ ಪ್ಯಾರಿಸ್' ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ: ಬಿಬಿಎಂಪಿ

ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರು: ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಗಣೇಶ ಹಬ್ಬದ ಆಚರಣೆಗೆ ಇನ್ನೊಂದೇ ತಿಂಗಳು ಬಾಕಿ ಉಳಿದಿದೆ. ಈ ಬಾರಿ ಪಿಒಪಿ ಗಣೇಶನ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕೆಂದು ಎಲ್ಲಾ ವಲಯ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವುದಕ್ಕೆ ಮಾತ್ರ ಬಿಬಿಎಂಪಿ ಅನುಮತಿ ನೀಡಿದೆ.

ಬಿಬಿಎಂಪಿ, ಪೊಲೀಸ್ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿಗಳ ತಂಡ ಯಾವ ಏರಿಯಾದಲ್ಲಿಯಾದರೂ ಪಿಒಪಿ, ಥರ್ಮೊಕೋಲ್ ಮತ್ತು ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಗಣೇಶನ ಮೂರ್ತಿಗಳನ್ನು ತಯಾರಿಸಿದ್ದಾರೆಯೇ ಎಂದು ತಪಾಸಣೆ ಮಾಡಲು ಭೇಟಿ ನೀಡುತ್ತಾರೆ. ಮಳಿಗೆಗಳು ಅಥವಾ ಉತ್ಪಾದಕ ಘಟಕಗಳು ನಿಯಮ ಉಲ್ಲಂಘಿಸುವುದು ಕಂಡುಬಂದರೆ ಅಧಿಕಾರಿಗಳು ನೊಟೀಸ್ ಜಾರಿ ಮಾಡುತ್ತಾರೆ. ಪಿಒಪಿ ಗಣೇಶ ಮೂರ್ತಿಗಳಿಗೆ ಇಂತಹ ನಿಷೇಧಕಾರಿ ವಸ್ತುಗಳ ಬಳಕೆ ಮಾಡುವವರ ವಿರುದ್ಧ ಕೂಡ ಕೇಸು ದಾಖಲಿಸಲಾಗುವುದು ಎಂದರು.

ವಿಗ್ರಹ ತಯಾರಕರು ಜೇಡಿಮಣ್ಣನ್ನು ಬಳಸಬೇಕು ಮತ್ತು ಅದರ ಬಳಕೆಗೆ ಉತ್ತೇಜಿಸಲಾಗುವುದು ಎಂದು ಆಯುಕ್ತರು ಹೇಳಿದರು. ಕೆರೆಗಳ ಮಾಲಿನ್ಯ ತಪ್ಪಿಸಲು ಬಿಬಿಎಂಪಿ ಅಧಿಕಾರಿಗಳು ಗಣೇಶನ ವಿಗ್ರಹಗಳನ್ನು ಬಿಡಲು ಕಲ್ಯಾಣಿಗೆ ವ್ಯವಸ್ಥೆ ಮಾಡಲಿದ್ದಾರೆ. ಉತ್ಸವಕ್ಕಾಗಿ 63 ಉಪವಿಭಾಗಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ವಲಯ ಆಯುಕ್ತರಿಗೆ ಸ್ಥಾಯಿ ಸೂಚನೆಗಳನ್ನು ನೀಡಲಾಗಿದೆ, ಅವರು ಅನುಮತಿ, ಮುಳುಗುವಿಕೆ ಮತ್ತು ಇತರ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿದರು.

ಈ ಮಧ್ಯೆ, ಈ ಬಾರಿಯ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಎಲ್ಲಾ ನಗರ ಪಾಲಿಕೆಗಳು ಮತ್ತು ಪುರಸಭೆಗಳು ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರ ಕೂಡ ಸುತ್ತೋಲೆ ಹೊರಡಿಸಿದೆ. ವಿಗ್ರಹಗಳು ಮತ್ತು ಗಣೇಶ ಮೂರ್ತಿಯ ಪೆಂಡಾಲ್ ಗಳನ್ನು ಇಡಲು ಬಯಸುವ ಜನರು ಮತ್ತು ಸಮುದಾಯಗಳು ಸಂಬಂಧಪಟ್ಟ ಅಧಿಕಾರಿಗಳಿಂದ NOC ಗಳನ್ನು ಪಡೆಯಬೇಕು. ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಶಿಷ್ಟಾಚಾರ ಪ್ರಕಾರ ಗಣೇಶನ ಮೂರ್ತಿಗಳ ವಿಸರ್ಜನೆ  ಮಾಡಲಾಗುತ್ತದೆ. ಸಂಚಾರ ದಟ್ಟಣೆ ತಪ್ಪಿಸಲು ಸಾಕಷ್ಟು ವಿಸರ್ಜನೆ ಟ್ಯಾಂಕ್‌ಗಳನ್ನು ನಿಯೋಜಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT