ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್‌ ವರದಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌ ಬಿಡುಗಡೆ, ಇದು ದೇಶದಲ್ಲೇ ಪ್ರಥಮ: ಸಚಿವ ಡಾ. ಕೆ.ಸುಧಾಕರ್‌

ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ 'ಕರ್ನಾಟಕ ವಿಷನ್‌ ವರದಿ' ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು.

ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ 'ಕರ್ನಾಟಕ ವಿಷನ್‌ ವರದಿ' ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು.

ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, 'ಕರ್ನಾಟಕ ವಿಷನ್‌ ವರದಿ' ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಡಾ.ಗುರುರಾಜ್‌ ನೇತೃತ್ವದ ತಂಡ ಒಂದು ವರ್ಷ ಕಾಲ ಅಧ್ಯಯನಗಳು, ಸಂಶೋಧನೆಗಳು, ಸಭೆಗಳನ್ನು ನಡೆಸಿ ಈ ವರದಿ ರೂಪಿಸಿದೆ. 250 ಕ್ಕೂ ಅಧಿಕ ತಜ್ಞರು ಈ ವರದಿ ರೂಪಿಸಲು ಸಲಹೆ ನೀಡಿದ್ದಾರೆ. ಬೇರೆ ದೇಶಗಳ ಉತ್ತಮ ಕ್ರಮಗಳನ್ನು ಕೂಡ ಇಲ್ಲಿ ದಾಖಲಿಸಲಾಗಿದೆ. ಟೆಲಿ ಮೆಡಿಸಿನ್‌, ಗ್ರಾಮೀಣ ಪ್ರದೇಶದಿಂದ ಆರಂಭವಾಗಿ ತೃತೀಯ ಹಂತದ ಆರೋಗ್ಯ ಸೇವೆ ಸೇರಿದಂತೆ ಅನೇಕ ಅಂಶಗಳನ್ನು ಇದು ಒಳಗೊಂಡಿದೆ. ಇದನ್ನು ಮುಖ್ಯಮಂತ್ರಿಗಳು ಪ್ರಧಾನಿಗಳಿಗೂ ನೀಡಲಿದ್ದಾರೆ ಎಂದರು.

ಅನೇಕರು ವೈದ್ಯರ ಕೈ ಗುಣ ನಂಬುತ್ತಾರೆ. ರೋಗಿಗಳಿಗೆ ವೈದ್ಯರ ಮೇಲೆ ಇರುವ ನಂಬಿಕೆ, ಪ್ರೀತಿಯನ್ನು ಇದು ತೋರಿಸುತ್ತದೆ. ಹಾಗೆಯೇ ವೈದ್ಯರು ಹಾಗೂ ರೋಗಿಗಳ ನಡುವಿನ ಬಾಂಧವ್ಯವನ್ನು ಸೂಚಿಸುತ್ತದೆ. ದೇವರು ಎಲ್ಲಾ ಕಡೆ ಇರಲು ಸಾಧ್ಯವಿಲ್ಲವೆಂದೇ ವೈದ್ಯರನ್ನು ಸೃಷ್ಟಿಸಲಾಗಿದೆ ಎಂದೂ ಹೇಳಲಾಗುತ್ತದೆ. ಆ ಮಟ್ಟಿಗೆ ಸಮಾಜ ವೈದ್ಯರನ್ನು ಗೌರವಿಸುತ್ತದೆ ಎಂದರು.

ಮೂರನೇ ಡೋಸ್‌ನಲ್ಲಿ ಶೇ.100 ರಷ್ಟು ಸಾಧನೆಗೆ ಶ್ರಮಿಸಿ:

ಕಳೆದ ನೂರು ವರ್ಷಗಳಲ್ಲೂ ಕಾಣದ ಕೋವಿಡ್‌ ಸಾಂಕ್ರಾಮಿಕವನ್ನು ನಾವೆಲ್ಲರೂ ಎದುರಿಸಿದ್ದೇವೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ಸು ಕಾಣಲು ವೈದ್ಯರೇ ಪ್ರಮುಖ ಕಾರಣರಾಗಿದ್ದಾರೆ. ಕೋವಿಡ್‌ ಲಸಿಕಾಕರಣದಲ್ಲಿ ಎರಡು ಡೋಸ್‌ಗಳಲ್ಲಿ ಶೇ.100 ರಷ್ಟು ಸಾಧನೆ ಆಗಿದೆ. ಇದಕ್ಕೂ ವೈದ್ಯರ ಶ್ರಮವೇ ಕಾರಣವಾಗಿದೆ. ಹಾಗೆಯೇ, ಮೂರನೇ ಡೋಸ್‌ನಲ್ಲೂ ಶೇ.100 ರಷ್ಟು ಸಾಧನೆ ಮಾಡಲು ಎಲ್ಲಾ ವೈದ್ಯರು ಶ್ರಮಿಸಬೇಕು ಎಂದು ಸಚಿವರು ಕೋರಿದರು.

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಈವರೆಗೆ ಕೆಡರ್‌ ಮಾಡಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಸಮಿತಿ ರಚಿಸಿದ್ದು, ಆ ವರದಿಯ ಅನ್ವಯ ಕ್ರಮ ವಹಿಸಲಾಗುತ್ತದೆ. ಇದು ಕೂಡ ಐತಿಹಾಸಿಕ ಹಾಗೂ ಕ್ರಾಂತಿಕಾರಿಕ ನಿರ್ಣಯ ಎಂದರು.

ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಗೆ ಸರ್ಕಾರ ಆದ್ಯತೆ ನೀಡಿದ್ದು, ಉತ್ತರ ಕರ್ನಾಟಕ ಸೇರಿದಂತೆ ಅಭಿವೃದ್ಧಿ ವಂಚಿತ ಜಿಲ್ಲೆಗಳಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಒಂದು ತಿಂಗಳಲ್ಲೇ ಇದಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ನಗರಗಳಲ್ಲಿ ಬಿಪಿಎಲ್‌ ಕುಟುಂಬಗಳು ಹೆಚ್ಚಿರುವ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್‌' ಆರಂಭಿಸಲಾಗುತ್ತಿದೆ. ಎರಡು ತಿಂಗಳೊಳಗೆ ಬೆಂಗಳೂರಿನಲ್ಲಿ 243 ಕ್ಲಿನಿಕ್‌ ಕಾರ್ಯಾರಂಭವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT