ಕರ್ನಾಟಕ ಲೋಕಾಯುಕ್ತ 
ರಾಜ್ಯ

ಬಿಬಿಎಂಪಿ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಹಲವು ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಸ್ಪತ್ರೆಗಳು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ....

ಬೆಂಗಳೂರು: ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಸ್ಪತ್ರೆಗಳು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯಗಳ ಕೊರತೆ, ನಿರ್ವಹಣೆಯಲ್ಲಿನ ಲೋಪ, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ, ಔಷಧಗಳ ವಿತರಣೆ ಮತ್ತು ಇತರ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿತು.

ನಗರದ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಹಲವು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿದೆ.

ಇತ್ತೀಚಿಗಷ್ಟೇ ಭ್ರಷ್ಟಾಚಾರವನ್ನು ಪರಿಶೀಲಿಸಲು ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಸಾಮೂಹಿಕ ಹಠಾತ್ ಭೇಟಿ ನೀಡಿ, ಪರಿಶೀಲನೆ ನಡೆಸಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ರಚಿಸಿದ 10 ತಂಡಗಳು ಇಂದು ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಮಿಂಟೋ ಕಣ್ಣಿನ ಆಸ್ಪತ್ರೆ, ವಾಣಿವಿಲಾಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಡಾ.ಬಾಬು ಜಗಜೀವನರಾಮ್ ನಗರ ಜನರಲ್ ಆಸ್ಪತ್ರೆ, ಹಲಸೂರು ರೆಫರಲ್ ಆಸ್ಪತ್ರೆ, ಎಚ್. ಸಿದ್ದಯ್ಯ ರಸ್ತೆ ರೆಫರಲ್ ಆಸ್ಪತ್ರೆಗಳಿ ಭೇಟಿ ನೀಡಿ, ಪರಿಶೀಲನೆ ನಡೆಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!