ರಾಜ್ಯ

ಬಿಡಿಎ ಆಯುಕ್ತ ರಾಜೇಶ್ ಗೌಡ ಎತ್ತಂಗಡಿ, ನೂತನ ಆಯುಕ್ತರಾಗಿ ಕುಮಾರ್‌ ನಾಯ್ಕ್‌ ನೇಮಕ

Lingaraj Badiger

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯ್ಕ್‌ ಅವರನ್ನು ಬಿಡಿಎ ನೂತನ ಆಯಕ್ತರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಹಲವು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್‌ ನಿನ್ನೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಕೋರ್ಟ್‌ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ರಾಜೇಶ್ ಗೌಡ ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕುಮಾರ್ ನಾಯ್ಕ್ ಅವರಿಗೆ ಹೆಚ್ಚುವರಿಯಾಗಿ ಬಿಡಿಎ ಆಯುಕ್ತರ ಹುದ್ದೆ ನೀಡಲಾಗಿದೆ.

SCROLL FOR NEXT