ಕಲಾಸಿಪಾಳ್ಯ ಮಾರ್ಕೆಟ್ (ಸಂಗ್ರಹ ಚಿತ್ರ) 
ರಾಜ್ಯ

ಸಿಂಗೇನ ಅಗ್ರಹಾರಕ್ಕೆ ಕಲಾಸಿಪಾಳ್ಯ ಮಾರುಕಟ್ಟೆ ವರ್ಗಾವಣೆ; ನಷ್ಟದ ಭಯದಲ್ಲಿರುವ ಸಗಟು ವ್ಯಾಪಾರಿಗಳು

'ಕಲಾಸಿಪಾಳ್ಯ ಮಾರುಕಟ್ಟೆಯನ್ನು ಹೊಸೂರು ರಸ್ತೆಯಲ್ಲಿರುವ ಸಿಂಗೇನ ಅಗ್ರಹಾರಕ್ಕೆ ವರ್ಗಾವಣೆ ಮಾಡುವುದರ ವಿರುದ್ಧ ಅಭಿಪ್ರಾಯ ಹೊಂದಿದ್ದು, ಸಾಗಣೆ ವೆಚ್ಚ ಹೆಚ್ಚಳ, ವ್ಯಾಪಾರದಲ್ಲಿ ನಷ್ಟ ಅನುಭವಿಸಬೇಕಾದ ಆತಂಕ ಹೊಂದಿದ್ದಾರೆ.

ಬೆಂಗಳೂರು: 'ಕಲಾಸಿಪಾಳ್ಯ ಮಾರುಕಟ್ಟೆಯನ್ನು ಹೊಸೂರು ರಸ್ತೆಯಲ್ಲಿರುವ ಸಿಂಗೇನ ಅಗ್ರಹಾರಕ್ಕೆ ವರ್ಗಾವಣೆ ಮಾಡುವುದರ ವಿರುದ್ಧ ಅಭಿಪ್ರಾಯ ಹೊಂದಿದ್ದು, ಸಾಗಣೆ ವೆಚ್ಚ ಹೆಚ್ಚಳ, ವ್ಯಾಪಾರದಲ್ಲಿ ನಷ್ಟ ಅನುಭವಿಸಬೇಕಾದ ಆತಂಕ ಹೊಂದಿದ್ದಾರೆ.

ಮಾರ್ಕೆಟ್ ನ್ನು ವರ್ಗಾವಣೆ ಮಾಡುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೈಸ್ ಇಲ್ಯಾಜ್, ಕಲಾಸಿಪಾಳ್ಯ ಮಾರುಕಟ್ಟೆ ಜನರಿಗೆ ಆಗಮಿಸುವುದಕ್ಕೆ ಸುಲಭವಾಗಿರುವ ಕೇಂದ್ರ ಪ್ರದೇಶದಲ್ಲಿದೆ. ಹತ್ತಿರದಲ್ಲಿ ಬಸ್ ನಿಲ್ದಾಣ ಇರುವುದರಿಂದ ರೈತರಿಗೆ ತಮ್ಮ ಉತ್ಪನ್ನಗಳನ್ನು ತಂದು ಮಾರಾಟ ಮಾಡುವುದಕ್ಕೆ ಸುಲಭವಾಗಿರಲಿದೆ, ಮಾರ್ಕೆಟ್ ವರ್ಗಾವಣೆಯಾಗದೇ ಇದ್ದಲ್ಲಿ ಅದರಿಂದ ಸಣ್ಣ ವ್ಯಾಪಾರ ಮಾಡುವ ಮಾಲಿಕರಿಗೆ ಒಳಿತಾಗಲಿದೆ.

ಸಿಂಗೇನ ಅಗ್ರಹಾರದ 48 ಎಕರೆ ಭೂಮಿಯಲ್ಲಿ ಹೊಸ ತರಕಾರಿ ಮಾರುಕಟ್ಟೆ ಶೀಘ್ರವೇ ಬರಲಿದ್ದು, 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿಶೇಷ ಮಾರುಕಟ್ಟೆ (ಹಣ್ಣು, ತರಕಾರಿ, ಹೂವು) ಗಾಗಿ ಇರುವ ವಿಶೇಷ ಕಾರ್ಯದರ್ಶಿ ಡಾ. ವಿ ರಾಜಣ್ಣ ಮಾತನಾಡಿ ಇನ್ನು 3-4 ತಿಂಗಳಲ್ಲಿ ಕಲಾಸಿಪಾಳ್ಯದ ಮಾರುಕಟ್ಟೆ ಸಿಂಗೇನ ಅಗ್ರಹಾರಕ್ಕೆ ಸ್ಥಳಾಂತರಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದರೂ ಹಣ್ಣು ಹಾಗೂ ತರಕಾರಿಗಳ ಸಗಟು ವ್ಯಾಪಾರಿಗಳ ಸಂಘದ ಅಧ್ಯಕ್ಷ ಆರ್ ವಿ ಗೋಪಿ ಪ್ರತಿಕ್ರಿಯೆ ನೀಡಿದ್ದು, ಮಾರುಕಟ್ಟೆ ಸ್ಥಳಾಂತರಗೊಳಿಸುವುದರಿಂದ ಉಪಯೋಗವಾಗಲಿದೆ. ಹೆಚ್ಚಿನ ಜಾಗ ಸಿಗಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಸಾಗಣೆ ಸಮಸ್ಯೆಯನ್ನೂ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT