ಡಿ.ಕೆ ಶಿವಕುಮಾರ್ 
ರಾಜ್ಯ

ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರು: ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಇದ್ದದ್ದು ಶೇ. 90ರಷ್ಟು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, 2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು- ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ . ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ ಎಂದು ಸವಾಲೆಸೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT