ಡಿ.ಕೆ ಶಿವಕುಮಾರ್ 
ರಾಜ್ಯ

ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರು: ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಇದ್ದದ್ದು ಶೇ. 90ರಷ್ಟು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, 2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು- ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ . ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ ಎಂದು ಸವಾಲೆಸೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT