ಮುರುಘಾ ಶ್ರೀ 
ರಾಜ್ಯ

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ

ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಚಿತ್ರದುರ್ಗ: ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮಠದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದರು.

ಈ ನೆಲದ ಕಾನೂನು ಎಲ್ಲರಿಗೂ ಒಂದೇ , ಕಾನೂನನ್ನು ಗೌರವಿಸೋಣ ಎಂದ ಶ್ರೀಗಳು, ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲುಪ್ರಯತ್ನಿಸಲಾಗುವುದು, ಎಲ್ಲರೂ ಹೋರಾಡುವ ಮೂಲಕ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ಶೀಘ್ರದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಅವರು ಹೇಳಿದರು. 

ಭಕ್ತಾಧಿಗಳು ಯಾವುದೇ ಕಾರಣಕ್ಕೂ ಆತಂಕಪಡಬೇಕಾಗಿಲ್ಲ, ಯಾವುದೇ ಊಹಾಪೋಗಳಿಗೆ ಕಿವಿಗೂಡಬಾರದು. ಏನೋ ಒಂದು ಅಹಿತಕರ ಸಂದರ್ಭ ಎದುರಾಗಿದೆ. ಅದನ್ನು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳೋಣ, ಕಷ್ಟ ಸಂದರ್ಭದಲ್ಲಿ ಹೊರಗ ಬರೋಣ ಎಂದು ಭಕ್ತರಿಗೆ ವಿಶ್ವಾಸ ತುಂಬಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT