ಮುರುಘಾ ಶ್ರೀ 
ರಾಜ್ಯ

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ

ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಚಿತ್ರದುರ್ಗ: ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮಠದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದರು.

ಈ ನೆಲದ ಕಾನೂನು ಎಲ್ಲರಿಗೂ ಒಂದೇ , ಕಾನೂನನ್ನು ಗೌರವಿಸೋಣ ಎಂದ ಶ್ರೀಗಳು, ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲುಪ್ರಯತ್ನಿಸಲಾಗುವುದು, ಎಲ್ಲರೂ ಹೋರಾಡುವ ಮೂಲಕ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ಶೀಘ್ರದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಅವರು ಹೇಳಿದರು. 

ಭಕ್ತಾಧಿಗಳು ಯಾವುದೇ ಕಾರಣಕ್ಕೂ ಆತಂಕಪಡಬೇಕಾಗಿಲ್ಲ, ಯಾವುದೇ ಊಹಾಪೋಗಳಿಗೆ ಕಿವಿಗೂಡಬಾರದು. ಏನೋ ಒಂದು ಅಹಿತಕರ ಸಂದರ್ಭ ಎದುರಾಗಿದೆ. ಅದನ್ನು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳೋಣ, ಕಷ್ಟ ಸಂದರ್ಭದಲ್ಲಿ ಹೊರಗ ಬರೋಣ ಎಂದು ಭಕ್ತರಿಗೆ ವಿಶ್ವಾಸ ತುಂಬಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT