ಬಾರಿ ಮಳೆಯಿಂದಾಗಿ ಮೈಸೂರು-ಬೆಂಗಳೂರು ಹೆದ್ದಾರಿ ಸ್ಥಗಿತ 
ರಾಜ್ಯ

ಭಾರಿ ಮಳೆ: ಮಂಗಳವಾರ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹೌದು.. ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಪ್ರಮುಖವಾಗಿ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರಿನ ರಸ್ತೆಗಳು ಅಕ್ಷರಶಃ ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಭೀಕರ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರ ಅನುಮತಿಯ ಮೇರೆಗೆ ಆಗಸ್ಟ್ 30ರ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.

ದಾಖಲೆ ಮಳೆ
ಇನ್ನು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಮಲ್ಲೇಶ್ವರಂನ ಕೆಲವು ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸವಾರರು ಹರಸಾಹಸ ಪಡ್ತಿದ್ದಾರೆ. ನಾಯಂಡಹಳ್ಳಿ,ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ನಗರದ ಬಹುತೇಕ ಅಂಡರ್ ಪಾಸ್ ಗಳು ಮಳೆ‌ ನೀರಿನಿಂದ ಆವೃತವಾಗಿವೆ. ಉತ್ತರಹಳ್ಳಿ 39.5ಮಿ.ಮೀ, ನಾಯಂಡಗಳ್ಳಿ 49.5ಮಿ.ಮೀ ಮಳೆ, ಹಂಪಿ ನಗರ 44.5ಮಿ.ಮೀ ಮಳೆ, ಹೆಚ್.ಗೊಲ್ಲಹಳ್ಳಿ 44.5ಮಿ.ಮೀ, ಕೋಣನಕುಂಟೆ 55.0ಮಿ.ಮೀ, ಅರಕೆರೆ(ಬೊಮ್ಮನಹಳ್ಳಿ) 47.5ಮಿ.ಮೀ, ಬಿಳೇಕಹಳ್ಳಿ 60.5ಮಿ.ಮೀ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹಮಾವಾನ ಇಲಾಖೆ ಮಾಹಿತಿ ನೀಡಿದೆ.

ಧರೆಗುರುಳಿದ ಮರದ ಕೊಂಬೆ
ಇತ್ತ ಬೆಂಗಳೂರಿನ ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮಳೆಯಿಂದಾಗಿ ಕೊಂಬೆ ಬಿದ್ದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂ ಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ಹಲವರಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

2028ಕ್ಕೆ ರಾಜ್ಯದಲ್ಲಿ ಹಿಂದೂ ಸರ್ಕಾರ: ಪೊಲೀಸರ ಕೈಗೆ AK-47 ಕೊಟ್ಟು, ಪಾಕಿಸ್ತಾನ್ ಜಿಂದಾಬಾದ್ ಅಂದವರ ಬಾಯಿಗೆ ಗುಂಡಿಟ್ಟು ಹೊಡೆಸ್ತೀವಿ; ಯತ್ನಾಳ್

SCROLL FOR NEXT