ಚಾಮರಾಜಪೇಟೆ ಮೈದಾನದಲ್ಲಿ ಸಚಿವ ಅಶೋಕ್ 
ರಾಜ್ಯ

75 ವರ್ಷದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ.. ನಾಚಿಕೆ ಆಗಲ್ವ: SDPI ವಿರುದ್ಧ ಅಶೋಕ್ ಗರಂ

ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ರಾಮನಗರ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ರಾಮನಗರದ ಮಳೆ-ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಬೆಂಗಳೂರಿನ ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಯದ್ದು ಎಂದು ಕೋರ್ಟ್ ಕೂಡ ಸೂಚನೆ ಕೊಟ್ಟಿದ್ದೆ. ಮೈದಾನದಲ್ಲಿನ ಕಾರ್ಯಕ್ರಮಗಳ ಕುರಿತು ಅರ್ಜಿ ಹಾಕಿರುವವರ ಜೊತೆ ಮೀಟಿಂಗ್ ಮಾಡಲಾಗಿದೆ. ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ಅರಳಿಮರ, ಶೌಚಾಲಯ‌ ಇದೆ. ಮೈದಾನದ ವಿವಾದದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಅಂತೆಯೇ  ಚಾಮರಾಜಪೇಟೆಯ ಮೈದಾನ 7 ಕೋಟಿ ಕನ್ನಡಿಗರ ಸ್ವತ್ತು. ಮೈದಾನದ ಬಗ್ಗೆ ಮಾತಾಡಲು ಎಸ್​ಡಿಪಿಐನವರು ಯಾರು? ಆಗಸ್ಟ್ 31ರೊಳಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲಾಗುವುದು. ಅಂತೆಯೇ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಈ ಮೈದಾನದಲ್ಲಿ ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಆಗಲ್ವ... ಇದು ಸರ್ಕಾರದ ಸ್ವತ್ತು... ಇಲ್ಲಿ ತ್ರಿವರ್ಣ ಧ್ವಜ ಹಾರಿದ ರೀತಿಯಲ್ಲಿಯೇ ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT