ಪ್ರಾತಿನಿಧಿಕ ಚಿತ್ರ 
ರಾಜ್ಯ

ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಮಾಂಸ ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ, 'ಮಾರ್ಚ್ 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಹೇಳಿದೆ.

ಈ ತಿಂಗಳ ಆರಂಭದಲ್ಲಿ ಶುಕ್ರವಾರ ಕೃಷ್ಣ ಜನ್ಮಾಷ್ಟಮಿಯಂದು ಕೂಡ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆಯೋಜಕರು ಗಣೇಶ ಪ್ರತಿಷ್ಟಾಪನೆಗೆ ಬಿಬಿಎಂಪಿಯ ಏಕಗವಾಕ್ಷಿ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದೆ.

ಗಣೇಶ ಮೂರ್ತಿ ಕೂರಿಸಲು ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಏರಿಯಾ ಎಂದು 3 ರೀತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಚಾಮರಾಜಪೇಟೆ, ಚಂದ್ರಾಲೇಔಟ್, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಇಂತಹ ಏರಿಯಾಗಳಲ್ಲಿ ದಿನದ 24 ಗಂಟೆಯೂ ಭದ್ರತೆ ಇರಲಿದ್ದು, 3 ಪಾಳಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT