ವಿಡಿ ಸಾವರ್ಕರ್ 
ರಾಜ್ಯ

ಗಣೇಶೋತ್ಸವಗಳಲ್ಲಿ ಸಾವರ್ಕರ್ ಫೋಟೋ ಹಾಕುವ ಯೋಜನೆ: ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ

ವಿವಿಧ ಗಣೇಶ ಚತುರ್ಥಿ ಸಂಘಗಳ ಒಕ್ಕೂಟವಾದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪಾಲಿಕೆಗೆ ಮನವಿ ಮಾಡಿದೆ. 

ಬೆಂಗಳೂರು: ವಿವಿಧ ಗಣೇಶ ಚತುರ್ಥಿ ಸಂಘಗಳ ಒಕ್ಕೂಟವಾದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪಾಲಿಕೆಗೆ ಮನವಿ ಮಾಡಿದೆ.

ಸೆಪ್ಟೆಂಬರ್ 2, 3, 4 ಹಾಗೂ 9, 10, 11ರಂದು ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ ಸಮಿತಿ ಸದಸ್ಯ ಪ್ರಕಾಶ್ ರಾಜು, ಬಹುತೇಕ ಎಲ್ಲ ಗಣೇಶೋತ್ಸವ ನಡೆಯುವ ಸ್ಥಳಗಳಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರ ಹಾಕುವ ಯೋಜನೆ ಇದೆ ಎಂದು ತಿಳಿಸಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸ್ಮರಣಾರ್ಥ ಇತರ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು ಮತ್ತು ಸ್ಧಬ್ಧಚಿತ್ರಗಳನ್ನು ಸಹ ಹೈಲೈಟ್ ಮಾಡಲಾಗುವುದು ಎಂದು ಅವರು ಹೇಳಿದರು.

ಆಚರಣೆ ವೇಳೆ ಸಂಚಾರ ನಿಯಂತ್ರಣ, ಬೀದಿ ದೀಪ ನಿರ್ವಹಣೆ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಮಿತಿ ಬಿಬಿಎಂಪಿಗೆ ಮನವಿ ಸಲ್ಲಿಸಿದೆ. ಹೆಬ್ಬಾಳ, ಸ್ಯಾಂಕಿ, ಹಲಸೂರು, ಯಡಿಯೂರು ಸೇರಿದಂತೆ ಕೆರೆಗಳಲ್ಲಿ ವಿಗ್ರಹ ವಿಸರ್ಜನೆಗೆ ಕ್ರೇನ್‌ಗಳನ್ನು ನಿಯೋಜಿಸುವಂತೆ ಕೋರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT