ಗಣೇಶನ ಮೂರ್ತಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದೆ 
ರಾಜ್ಯ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ: ಮೂರು ದಿನ ವಿಗ್ರಹ ಇಡಲು ಅನುಮತಿ

ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ. 

ಹುಬ್ಬಳ್ಳಿ: ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ. 

ಪಾಲಿಕೆ ಈ ನಿರ್ಧಾರಕ್ಕೆ ಬರುವ ಮುನ್ನ ಸರಣಿ ಸಭೆ ನಡೆಸಲಾಗಿತ್ತು. ಈ ಕುರಿತು ನಿರ್ಧರಿಸಲು ಎಚ್‌ಡಿಎಂಸಿ ರಚಿಸಿರುವ ಸದನ ಸಮಿತಿ ನಿನ್ನೆ ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ ಸಮಿತಿಯು ಮಧ್ಯಾಹ್ನ 3 ಗಂಟೆಯವರೆಗೆ ಹೆಚ್ಚು ಜನರಿಗೆ ತಮ್ಮ ಪ್ರಾತಿನಿಧ್ಯ ಸಲ್ಲಿಸಲು ಅವಕಾಶ ನೀಡಿದ್ದರಿಂದ ಹೆಚ್ಚು ಸಮಯ ಹಿಡಿಯಿತು. ಮುಚ್ಚಿದ ಲಕೋಟೆಯಲ್ಲಿ ಸಮಿತಿಯು ವರದಿಯನ್ನು ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಹಸ್ತಾಂತರಿಸಿತು.

ಈ ಮಧ್ಯೆ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ಬಿಜೆಪಿ ಸಭೆ ನಡೆದರೆ, ಡಿಸಿಸಿ ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವುದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಸಮಿತಿಯ ಸದಸ್ಯರು ಸಭೆಗೆ ಹಾಜರಾಗಲಿಲ್ಲ.

ಸಮಿತಿಯು ತನ್ನ ವರದಿಯನ್ನು ಮೇಯರ್‌ಗೆ ಸಲ್ಲಿಸುವ ಮೊದಲು, ಕಾಂಗ್ರೆಸ್ ಸದಸ್ಯರಾದ ಇಮಾಮಹುಸೇನ್ ಎಲಿಗಾರ ಮತ್ತು ನಿರಂಜನ್ ಹಿರೇಮಠ ಅವರು ಅಂಚಟಗೇರಿಗೆ ಪತ್ರವನ್ನು ಸಲ್ಲಿಸಿದರು, ಸಮಿತಿಯ ಸಂವಿಧಾನದ ಬಗ್ಗೆಯೇ ಆಕ್ಷೇಪಣೆಗಳನ್ನು ಎತ್ತಿದ್ದರು. ತಾವು ಸಮಿತಿಯನ್ನು ವಿರೋಧಿಸುತ್ತಿದ್ದು ಅದು ತೆಗೆದುಕೊಂಡ ನಿರ್ಧಾರಕ್ಕೆ ಬೆಂಬಲವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT