ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಪಾರ್ಕಿಂಗ್ ನೀತಿ 2.0 ಗೆ ಗ್ರೀನ್‌ ಸಿಗ್ನಲ್, ವಾಹನ ಮಾಲೀಕರ ಜೇಬಿಗೆ ಕತ್ತರಿ

ಬೆಂಗಳೂರಿನ ಪಾರ್ಕಿಂಗ್ ನೀತಿ 2.0 ಗೆ ಸಂಬಂಧಿಸಿದಂತೆ ನಗರ ಭೂ ಸಾರಿಗೆ ನಿರ್ದೇಶನಾಲಯ(ಡಿಯುಎಲ್ ಟಿ) ಕಳುಹಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ರಸ್ತೆಗಳಲ್ಲಿ ನಿಲ್ಲಿಸುವ ಪ್ರತಿಯೊಂದು...

ಬೆಂಗಳೂರು: ಬೆಂಗಳೂರಿನ ಪಾರ್ಕಿಂಗ್ ನೀತಿ 2.0 ಗೆ ಸಂಬಂಧಿಸಿದಂತೆ ನಗರ ಭೂ ಸಾರಿಗೆ ನಿರ್ದೇಶನಾಲಯ(ಡಿಯುಎಲ್ ಟಿ) ಕಳುಹಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ರಸ್ತೆಗಳಲ್ಲಿ ನಿಲ್ಲಿಸುವ ಪ್ರತಿಯೊಂದು ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ.

ಬಿಬಿಎಂಪಿಯು ಪಾರ್ಕಿಂಗ್ ದರವನ್ನು ನಿಗದಿಪಡಿಸಿ ನಂತರ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

ಸ್ಥಳವನ್ನು ಆಧರಿಸಿ ಗಂಟೆಗೆ ಸುಮಾರು 25 ರಿಂದ 75 ರೂ. ಪಾರ್ಕಿಂಗ್ ಶುಲ್ಕ ವಿಧಿಸಲು ಡಿಯುಎಲ್ ಟಿ ಪ್ರಸ್ತಾವನೆ ಸಲ್ಲಿಸಿದೆ. ಟ್ರಾಫಿಕ್ ಅನ್ನು ಸುಗಮಗೊಳಿಸಲು, ವಾಹನ ಮಾಲೀಕರಲ್ಲಿ ಶಿಸ್ತು ತರಲು, ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕ ಸಾರಿಗೆ ಬಳಸಲು ಜನರನ್ನು ಉತ್ತೇಜಿಸಲು ಈ ಪಾರ್ಕಿಂಗ್ ನೀತಿ ಜಾರಿಗೆ ತರಲಾಗುತ್ತಿದೆ.

ಈ ಹಿಂದೆ ಬ್ರಿಗೇಡ್ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಮತ್ತು ಸೇಂಟ್ ಮಾರ್ಕ್ಸ್ ರಸ್ತೆ ಸೇರಿದಂತೆ ಹತ್ತು ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಈಗ ನಗರದ ಹೆಚ್ಚಿನ ರಸ್ತೆಗಳನ್ನು ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಡಿಯುಎಲ್ ಟಿ ಸಂಸ್ಥೆಯು ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆಯ ಪ್ರಮಾಣ ಹೆಚ್ಚಳ ಹಾಗೂ ಖಾಸಗಿ ವಾಹನಗಳ ನಿಯಂತ್ರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ, ಸರ್ಕಾರಕ್ಕೆ ತನ್ನ ಸಮಗ್ರ ಅಧ್ಯಯನ ವರದಿಯನ್ನು ಸಲ್ಲಿಸಿತ್ತು. ಈ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಈಗ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ನೇಪಾಳದಿಂದ ಭಾರತದ ವಿವಾದಿತ ಪ್ರದೇಶ ಒಳಗೊಂಡ ನಕ್ಷೆ ಇರುವ ಹೊಸ 100 ರೂ. ನೋಟು ಬಿಡುಗಡೆ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

SCROLL FOR NEXT