ಪ್ರಾತಿನಿಧಿಕ ಚಿತ್ರ 
ರಾಜ್ಯ

ಡಿಪೋ ಮ್ಯಾನೇಜರ್ ಕಿರುಕುಳ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆ

ಡಿಪೋ ಮ್ಯಾನೇಜರ್ ಕಿರುಕುಳವನ್ನು ನೆಪವಾಗಿಟ್ಟುಕೊಂಡು 48 ವರ್ಷದ ಬಿಎಂಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಈ ವೇಳೆ ಡೆತ್‌ನೋಟ್ ಪತ್ತೆಯಾಗಿದ್ದು, ಶಂಕಿತನ ಹೆಸರನ್ನು ನಮೂದಿಸಿದ್ದಾರೆ.

ಬೆಂಗಳೂರು: ಡಿಪೋ ಮ್ಯಾನೇಜರ್ ಕಿರುಕುಳವನ್ನು ನೆಪವಾಗಿಟ್ಟುಕೊಂಡು 48 ವರ್ಷದ ಬಿಎಂಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಈ ವೇಳೆ ಡೆತ್‌ನೋಟ್ ಪತ್ತೆಯಾಗಿದ್ದು, ಶಂಕಿತನ ಹೆಸರನ್ನು ನಮೂದಿಸಿದ್ದಾರೆ.

ಮೃತನನ್ನು ರಾಜರಾಜೇಶ್ವರಿ ನಗರದ ಶ್ರೀನಿವಾಸಪುರ ಕ್ರಾಸ್‌ನ ನಿವಾಸಿ ಹೊಳಬಸಪ್ಪ ಚಿಂಚನಕಂಡಿ ಎಂದು ಗುರುತಿಸಲಾಗಿದ್ದು, ಆರ್‌ಆರ್‌ನಗರದಲ್ಲಿರುವ ಬಿಎಂಟಿಸಿಯ 21ನೇ ಡಿಪೋದ ವ್ಯವಸ್ಥಾಪಕ ಮಲ್ಲಿಕಾರ್ಜುನಯ್ಯ ಅವರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಂತ್ರಸ್ತನ ಪತ್ನಿ ಸೀಮಾ ಸೋಮವಾರ ದೂರು ದಾಖಲಿಸಿದ್ದಾರೆ.

ರಜೆ ನಿರಾಕರಣೆಯೂ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಸಂತ್ರಸ್ತ ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಮಧ್ಯಾಹ್ನ 12.30ಕ್ಕೆ ಸೀಮಾ ಅವರಿಗೆ ಪತಿಯ ಸಹೋದ್ಯೋಗಿಗಳಿಂದ ಆತ್ಮಹತ್ಯೆ ಕುರಿತು ಕರೆ ಬಂದಿತ್ತು. ಸಂತ್ರಸ್ತ ಡಿಪೋದಲ್ಲಿನ ಡೀಸೆಲ್ ಟ್ಯಾಂಕ್ ಹಿಂದೆ ನೇಣು ಬಿಗಿದುಕೊಂಡಿದ್ದು, ಆತನ ಶರ್ಟ್ ಜೇಬಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ, ವಿಕಲಚೇತನ ಮಗಳು ಸೇರಿದಂತೆ ಕುಟುಂಬ ಸದಸ್ಯರು ಹೊಳಬಸಪ್ಪ ಅವರ ಶವವನ್ನು ಇಟ್ಟುಕೊಂಡು ಮಂಗಳವಾರ ಡಿಪೋದ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ಮಲ್ಲಿಕಾರ್ಜುನಯ್ಯ ಅವರನ್ನು ಬಂಧಿಸಬೇಕು. ಸಾರಿಗೆ ಸಚಿವರು ಹಾಗೂ ಇತರೆ ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಡಿಪೋ ಮ್ಯಾನೇಜರ್ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಘಟನೆ ಬಿಎಂಟಿಸಿ ಅಧಿಕಾರಿಗಳ ಗಮನಕ್ಕೆ ಬಂದಿದೆ. ಚಾಲಕನ ಜೀವನ ಅಂತ್ಯಗೊಳ್ಳಲು ಕಿರುಕುಳವೇ ಕಾರಣವೇ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪೊಲೀಸ್ ತನಿಖೆಯ ಜೊತೆಗೆ ಬಿಎಂಟಿಸಿ ಕೂಡ ವಿಚಾರಣೆ ನಡೆಸುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT