ಸಾಂದರ್ಭಿಕ ಚಿತ್ರ 
ರಾಜ್ಯ

ಬೆಲೆ ಏರಿಕೆ ಬಿಸಿ ನಡುವೆಯೂ ನಾಡಿನಾದ್ಯಂತ ಸಡಗರ, ಸಂಭ್ರಮದ ಗಣೇಶೋತ್ಸವ, ಗಣ್ಯರ ಶುಭಾಶಯ

ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ  ಸಂಭ್ರಮ ಮನೆ ಮಾಡಿದೆ. ಬೆಲೆ ಏರಿಕೆ ನಡುವೆಯೂ ಜನತೆ ಶ್ರದ್ಧಾ- ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ.

ಬೆಂಗಳೂರು: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ  ಸಂಭ್ರಮ ಮನೆ ಮಾಡಿದೆ. ಬೆಲೆ ಏರಿಕೆ ನಡುವೆಯೂ ಜನತೆ ಶ್ರದ್ಧಾ- ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನರು ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸುತ್ತಿದ್ದಾರೆ.

ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬಾಳೆ ದಿಂಡು, ಹೂವು, ಹಣ್ಣು, ಮತ್ತಿತರ ಪೂಜಾ ಸಾಮಾಗ್ರಿಗಳ ಬೆಲೆ ಹೆಚ್ಚಾಗಿದ್ದರೂ ಜನತೆ ಎಂದಿನಂತೆ ಖರೀದಿಯಲ್ಲಿ ತೊಡಗಿದ್ದಾರೆ.

ಈ ಬಾರಿ ಪರಿಸರ ಸ್ನೇಹಿ ಗಣೇಶ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT