ರಾಜೇಶ್ವರಿ ಗಾಯಕ್ವಾಡ್ 
ರಾಜ್ಯ

ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ; ಯಾವುದೇ ದೂರು ದಾಖಲಾಗಿಲ್ಲ ಎಂದ ಪೊಲೀಸರು

ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ.

ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ. ಕೆಲವೊಂದು ಕಾಸ್ಮೆಟಿಕ್ ಖರೀದಿಗೆ ಬುಧವಾರ ಸಂಜೆ ಮಾರ್ಕೆಟ್ ಗೆ ತೆರಳಿದಾಗ ಈ ಘಟನೆ ನಡೆದಿದೆ.

ಕಾಸ್ಮೆಟಿಕ್ ಬಾಟಲ್​ಗಳನ್ನು ತೆರೆದು ನೋಡುತ್ತಿದ್ದ ರಾಜೇಶ್ವರಿ ಅವರಿಗೆ ಅಲ್ಲಿನ ಮಹಿಳಾ ಕೆಲಸಗಾರರು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಬಜಾರಿನ ಮಾಲೀಕ ಮಲ್ಲಿಕಾರ್ಜುನ ಕಾಸ್ಮೆಟಿಕ್ ಬಾಟಲ್​ಗಳನ್ನು ಓಪನ್ ಮಾಡದಂತೆ ರಾಜೇಶ್ವರಿ ಅವರಿಗೆ ಹೇಳಿದ್ದಾರೆ. ಇದರಿಂದ ರಾಜೇಶ್ವರಿ ಬೆಂಬಲಿಗರು ಹಾಗೂ ಬಜಾರಿನ ಮಾಲೀಕರು, ಕೆಲಸಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು ಗಲಾಟೆ ನಡೆದಿದೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಸೂಪರ್ ಬಜಾರಿನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಆದರೆ ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಉಜಮದಿ ಸೂಪರ್ ಬಜಾರಿನ ಕೆಲಸಗಾರರೇ ನನ್ನ ಜೊತೆಗೆ ವಾಗ್ವಾದ ನಡೆಸಿ ಅನುಚಿತವಾಗಿ ವರ್ತನೆ ಮಾಡಿದ್ದಾರೆಂದು ರಾಜೇಶ್ವರಿ ಗಾಯಕ್ವಾಡ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT