ರಾಜೇಶ್ವರಿ ಗಾಯಕ್ವಾಡ್ 
ರಾಜ್ಯ

ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ; ಯಾವುದೇ ದೂರು ದಾಖಲಾಗಿಲ್ಲ ಎಂದ ಪೊಲೀಸರು

ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ.

ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ. ಕೆಲವೊಂದು ಕಾಸ್ಮೆಟಿಕ್ ಖರೀದಿಗೆ ಬುಧವಾರ ಸಂಜೆ ಮಾರ್ಕೆಟ್ ಗೆ ತೆರಳಿದಾಗ ಈ ಘಟನೆ ನಡೆದಿದೆ.

ಕಾಸ್ಮೆಟಿಕ್ ಬಾಟಲ್​ಗಳನ್ನು ತೆರೆದು ನೋಡುತ್ತಿದ್ದ ರಾಜೇಶ್ವರಿ ಅವರಿಗೆ ಅಲ್ಲಿನ ಮಹಿಳಾ ಕೆಲಸಗಾರರು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಬಜಾರಿನ ಮಾಲೀಕ ಮಲ್ಲಿಕಾರ್ಜುನ ಕಾಸ್ಮೆಟಿಕ್ ಬಾಟಲ್​ಗಳನ್ನು ಓಪನ್ ಮಾಡದಂತೆ ರಾಜೇಶ್ವರಿ ಅವರಿಗೆ ಹೇಳಿದ್ದಾರೆ. ಇದರಿಂದ ರಾಜೇಶ್ವರಿ ಬೆಂಬಲಿಗರು ಹಾಗೂ ಬಜಾರಿನ ಮಾಲೀಕರು, ಕೆಲಸಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು ಗಲಾಟೆ ನಡೆದಿದೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಸೂಪರ್ ಬಜಾರಿನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಆದರೆ ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಉಜಮದಿ ಸೂಪರ್ ಬಜಾರಿನ ಕೆಲಸಗಾರರೇ ನನ್ನ ಜೊತೆಗೆ ವಾಗ್ವಾದ ನಡೆಸಿ ಅನುಚಿತವಾಗಿ ವರ್ತನೆ ಮಾಡಿದ್ದಾರೆಂದು ರಾಜೇಶ್ವರಿ ಗಾಯಕ್ವಾಡ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ