ರಾಜೇಶ್ವರಿ ಗಾಯಕ್ವಾಡ್ 
ರಾಜ್ಯ

ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ; ಯಾವುದೇ ದೂರು ದಾಖಲಾಗಿಲ್ಲ ಎಂದ ಪೊಲೀಸರು

ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ.

ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ. ಕೆಲವೊಂದು ಕಾಸ್ಮೆಟಿಕ್ ಖರೀದಿಗೆ ಬುಧವಾರ ಸಂಜೆ ಮಾರ್ಕೆಟ್ ಗೆ ತೆರಳಿದಾಗ ಈ ಘಟನೆ ನಡೆದಿದೆ.

ಕಾಸ್ಮೆಟಿಕ್ ಬಾಟಲ್​ಗಳನ್ನು ತೆರೆದು ನೋಡುತ್ತಿದ್ದ ರಾಜೇಶ್ವರಿ ಅವರಿಗೆ ಅಲ್ಲಿನ ಮಹಿಳಾ ಕೆಲಸಗಾರರು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಬಜಾರಿನ ಮಾಲೀಕ ಮಲ್ಲಿಕಾರ್ಜುನ ಕಾಸ್ಮೆಟಿಕ್ ಬಾಟಲ್​ಗಳನ್ನು ಓಪನ್ ಮಾಡದಂತೆ ರಾಜೇಶ್ವರಿ ಅವರಿಗೆ ಹೇಳಿದ್ದಾರೆ. ಇದರಿಂದ ರಾಜೇಶ್ವರಿ ಬೆಂಬಲಿಗರು ಹಾಗೂ ಬಜಾರಿನ ಮಾಲೀಕರು, ಕೆಲಸಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು ಗಲಾಟೆ ನಡೆದಿದೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಸೂಪರ್ ಬಜಾರಿನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಆದರೆ ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಉಜಮದಿ ಸೂಪರ್ ಬಜಾರಿನ ಕೆಲಸಗಾರರೇ ನನ್ನ ಜೊತೆಗೆ ವಾಗ್ವಾದ ನಡೆಸಿ ಅನುಚಿತವಾಗಿ ವರ್ತನೆ ಮಾಡಿದ್ದಾರೆಂದು ರಾಜೇಶ್ವರಿ ಗಾಯಕ್ವಾಡ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

ಗರ್ಭಕೋಶವನ್ನೇ ಕೈಯಿಂದ ಕಿತ್ತು ಬಿಸಾಕೋಣ ಅನಿಸಿತ್ತು; ವಿಪರೀತ ಮೂಡ್ ಸ್ವಿಂಗ್ಸ್: 'ಆ' ದಿನಗಳ ಭೀಕರತೆ ಬಿಚ್ಚಿಟ್ಟ ನಟಿ ಐಶ್ವರ್ಯಾ!

Video: ಅಭಿಮಾನಿ ಎಸೆದ ಹೂವಿನ ಚೆಂಡನ್ನು ಬಾಂಬ್ ಎಂದು ಭಾವಿಸಿ ಹೆದರಿ ಓಡಿದ Thalapathy Vijay?

ಮಹಿಳಾ ಮೀಸಲಾತಿ ಕುರಿತ ಚರ್ಚೆ: ಏ.15 ಕ್ಕೆ ಎಲ್ಲಾ ವಿರೋಧ ಪಕ್ಷಗಳ ಸಭೆ- ಮಲ್ಲಿಕಾರ್ಜುನ ಖರ್ಗೆ

SCROLL FOR NEXT